ದೇವೇಗೌಡ 
ರಾಜ್ಯ

ಕೆಪಿಎಸ್​ಸಿ ಪರೀಕ್ಷೆಯಲ್ಲಿ ಅಂಕ ಕಡಿತಕ್ಕೆ ವಿರೋಧ: ಮುಖ್ಯಮಂತ್ರಿ ಬೊಮ್ಮಾಯಿಗೆ ಹೆಚ್.ಡಿ.ದೇವೇಗೌಡ ಪತ್ರ

ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕವನ್ನು 25ಕ್ಕೆ ಕಡಿತಗೊಳಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ರಾಜ್ಯಸಭೆಯ ಜೆಡಿಎಸ್‌ ಸದಸ್ಯ ಎಚ್‌.ಡಿ. ದೇವೇಗೌಡ ವಿರೋಧಿಸಿದ್ದಾರೆ.

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕವನ್ನು 25ಕ್ಕೆ ಕಡಿತಗೊಳಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ರಾಜ್ಯಸಭೆಯ ಜೆಡಿಎಸ್‌ ಸದಸ್ಯ ಎಚ್‌.ಡಿ. ದೇವೇಗೌಡ ವಿರೋಧಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಕೆಪಿಎಸ್​ಸಿ ಇತ್ತೀಚಿನ ದಿನಗಳಲ್ಲಿ ಬದಲಾವಣೆಯ ನೆಪದಲ್ಲಿ ಸರ್ವಸಮ್ಮತವಾದ ಮತ್ತು ಬಹುಕಾಲದಿಂದ ಅನುಸರಿಸುತ್ತಿರುವ ಪ್ರಮಾಣಿತ ಕಾರ್ಯವಿಧಾನಗಳಿಗೆ ವಿರುದ್ಧವಾಗಿ ಸಾಗುವಂತೆ ಕಂಡು ಬರುತ್ತಿದೆ. ಇಂತಹ ದೂರದೃಷ್ಟಿಯಿಲ್ಲದ ಬದಲಾವಣೆಗಳಿಂದ ಭವಿಷ್ಯದಲ್ಲಿ ಉತ್ತಮ ಮತ್ತು ಕಾರ್ಯದಕ್ಷತೆವುಳ್ಳ ಅಧಿಕಾರಿಗಳನ್ನು ಆಯ್ಕೆಮಾಡಲು ಕಷ್ಟವಾಗಬಹುದು ಎಂದು ಹೇಳಿದ್ದಾರೆ.

ಕೆಪಿಎಸ್‌ಸಿಯಲ್ಲೂ ಕಾಲಕಾಲಕ್ಕೆ ಬದಲಾವಣೆ ಅಗತ್ಯ. ಆದರೆ, ಅಂತಹ ಬದಲಾವಣೆಗಳು ಸಮ್ಮತವಾಗಿರಬೇಕು ಮತ್ತು ಕೇಂದ್ರ ಲೋಕ ಸೇವಾ ಆಯೋಗದ ಮಾದರಿಯಲ್ಲೇ ಇರಬೇಕು. ಆಯೋಗದಲ್ಲಿ ದೀರ್ಘಕಾಲದಿಂದ ಜಾರಿಯಲ್ಲಿದ್ದ ಪ್ರಮಾಣಿತ ಕಾರ್ಯವಿಧಾನವನ್ನು 2020ರ ಜೂನ್ 4ರಂದು ಬದಲಾವಣೆ ಮಾಡಲಾಗಿತ್ತು. ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು 150 ರಿಂದ 50ಕ್ಕೆ ಇಳಿಕೆ ಮಾಡಲಾಗಿತ್ತು. ಈಗ ಅದನ್ನು 25ಕ್ಕೆ ಇಳಿಸುವ ತೀರ್ಮಾನ ಮಾಡಲಾಗಿದೆ. ಇಂತಹ ತೀರ್ಮಾನದಿಂದ ಗ್ರಾಮೀಣ ಪ್ರದೇಶದ ಸ್ಪರ್ಧಾ ಆಕಾಂಕ್ಷಿಗಳಿಗೆ ಸಮಸ್ಯೆ ಆಗಲಿದೆ ತಿಳಿಸಿದ್ದಾರೆ.

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಕೆಪಿಎಸ್‌ಸಿ ಕುರಿತು ಸಾರ್ವಜನಿಕರಲ್ಲಿ ಗೌರವ ಕಡಿಮೆಯಾಗುವುದರಲ್ಲಿ ಸಂಶಯವಿಲ್ಲ. ಈ ಎಲ್ಲ ತೀರ್ಮಾನಗಳನ್ನು ಕೈಬಿಡಬೇಕು. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲೇ ಮುಖ್ಯ ಪರೀಕ್ಷೆಯ ಅಂಕಗಳು ಮತ್ತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ನಿಗದಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT