ಸಾಂದರ್ಭಿಕ ಚಿತ್ರ 
ರಾಜ್ಯ

ಗಮನ ಸೆಳೆಯಲು ಯತ್ನ: 'ಕೋಮು ಹಲ್ಲೆ'ಯ ಸುಳ್ಳು ಕಥೆ ಸೃಷ್ಟಿಸಿದ 13 ವರ್ಷದ ಬಾಲಕ

ಸುರತ್ಕಲ್‌ನ ಮದರಸಾದಿಂದ ಕಳೆದ ಸೋಮವಾರ ಹಿಂದಿರುಗುತ್ತಿದ್ದ ವೇಳೆ ಅನ್ಯ ಧರ್ಮದ ಇಬ್ಬರಿಂದ ತಾನು ಹಲ್ಲೆಗೊಳಗಾದೆ ಎಂದು 13 ವರ್ಷದ ಬಾಲಕ ಹೇಳಿಕೊಂಡಿದ್ದಾನೆ.

ಮಂಗಳೂರು: ಸುರತ್ಕಲ್‌ನ ಮದರಸಾದಿಂದ ಕಳೆದ ಸೋಮವಾರ ಹಿಂದಿರುಗುತ್ತಿದ್ದ ವೇಳೆ ಅನ್ಯ ಧರ್ಮದ ಇಬ್ಬರಿಂದ ತಾನು ಹಲ್ಲೆಗೊಳಗಾದೆ ಎಂದು 13 ವರ್ಷದ ಬಾಲಕ ಹೇಳಿಕೊಂಡಿದ್ದಾನೆ.

ಆದರೆ ಪೊಲೀಸರು ಹೇಳುವ ಪ್ರಕಾರ, ತನಗೆ ಮನೆಯಲ್ಲಿ ಮತ್ತು ಶಾಲೆಯಲ್ಲಿ ಸರಿಯಾದ ಗಮನ ಸಿಗದ ಕಾರಣ ಬಾಲಕ ಹೆಣೆದ ಕಥೆಯಿದು ಎನ್ನುತ್ತಾರೆ, ಕೊನೆಗೆ ನಿನ್ನೆಗುರುವಾರ ಪೊಲೀಸರ ಮುಂದೆ ಬಾಲಕ ತಪ್ಪೊಪ್ಪಿಕೊಂಡಿದ್ದಾನೆ. ಬಾಲಕ ಪೆನ್ನಿನಿಂದ ತನ್ನ ಶರ್ಟ್ ನ್ನು ತಾನೇ ಹರಿದುಕೊಂಡಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ಬಾಲಕನ ಆರಂಭಿಕ ಹೇಳಿಕೆ, ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ಮತ್ತು ಇತರ ಸಾಂದರ್ಭಿಕ ಪುರಾವೆಗಳ ಆಧಾರದ ಮೇಲೆ ಪೊಲೀಸರು ನಿನ್ನೆ ಅವರನ್ನು ಮತ್ತೆ ವಿಚಾರಣೆಗೆ ಕರೆಯಲಾಯಿತು. ಹುಡುಗ ಬಡ ಕುಟುಂಬದಿಂದ ಬಂದಿದ್ದು, ಅಧ್ಯಯನದಲ್ಲಿ ಹಿಂದುಳಿದಿದ್ದರಿಂದ ಸ್ವಾಭಿಮಾನ ಕೊರತೆಯಿಂದ ಬಳಲುತ್ತಿದ್ದಾನೆ. 

ಮಕ್ಕಳ ಕಲ್ಯಾಣ ಸಮಿತಿ ಹಾಗೂ ವೈದ್ಯರ ಮುಂದೆ ಪೊಲೀಸರು ಮತ್ತೊಮ್ಮೆ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಲಕರ ಪಾಲಕರು ಹಾಗೂ ಸಮಾಜದ ಮುಖಂಡರನ್ನು ಕರೆಸಿ ಸಮಸ್ಯೆ ಕುರಿತು ಚರ್ಚಿಸಿದರು. ಈ ವಿಷಯ ಸುರತ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ S*x, ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT