ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ: ಬಿಬಿಎಂಪಿ

ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಬೆಂಗಳೂರು: ಬೆಂಗಳೂರಿನ 847 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ರಸ್ತೆ ಗುಂಡಿಗಳ ಕುರಿತಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆ ವೇಳೆ ಬಿಬಿಎಂಪಿ ಮಾಹಿತಿ ನೀಡಿದ್ದು, ನಗರದಲ್ಲಿ ಹೊಂಡಗಳಿಂದ ಕೂಡಿದ 847 ಕಿ.ಮೀ ರಸ್ತೆಯನ್ನು ಗುರುತಿಸಿದ್ದು, ದುರಸ್ತಿ ಮಾಡಬೇಕಿದೆ ಎಂದು ಬಿಬಿಎಂಪಿ ಒಪ್ಪಿಕೊಂಡಿದೆ.  ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಈ ಸಂಬಂಧ ವರದಿಯನ್ನು ಬಿಬಿಎಂಪಿ ವಕೀಲ ವಿ ಶ್ರೀನಿಧಿ ಅವರು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಮುಖ್ಯ ಎಂಜಿನಿಯರ್ ಎಂ ಲೋಕೇಶ್ ಅವರ ಸಮ್ಮುಖದಲ್ಲಿ ಸಲ್ಲಿಸಿದರು.

ನಗರದ ಒಟ್ಟು 1,392 ಕಿ.ಮೀ ರಸ್ತೆಗಳಲ್ಲಿ ಗುರುತಿಸಲಾದ ರಸ್ತೆಯು ಶೇಕಡಾ 61 ರಷ್ಟಿದೆ. 2015ರಲ್ಲಿ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ವರದಿ ಸಲ್ಲಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರಿಗೆ ಭೇಟಿ ನೀಡಿದ್ದಕ್ಕಾಗಿ ದುರಸ್ತಿ ಮಾಡಿದ ರಸ್ತೆಗಳು ಹಾಳಾಗಿವೆ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ಪಾಲಿಕೆ ಅಧಿಕಾರಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರಲು ಕಾರಣ ಎಂದು ಗಿರಿನಾಥ್ ಅವರನ್ನು ತರಾಟೆಗೆ ತೆಗೆದುಕೊಂಡರು. ಆದರೆ ನೀರು ಸೋರಿಕೆಯಿಂದಾಗಿ ಹಾಳಾದ ರಸ್ತೆಗಳನ್ನು ಪ್ರಧಾನಿ ಬಳಸಿಲ್ಲ ಎಂದು ಬಿಬಿಎಂಪಿ ವಕೀಲರು ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದರು.

ಬಿಬಿಎಂಪಿಯು ಅಮೆರಿಕದ ರೋಡ್ ಟೆಕ್ನಾಲಜಿ ಸೊಲ್ಯೂಷನ್ಸ್ (ಎಆರ್‌ಟಿಎಸ್) ನೊಂದಿಗೆ ಬುಧವಾರ ಒಪ್ಪಂದ ಮಾಡಿಕೊಂಡಿದ್ದು, 397 ಕಿಮೀ ಗುಂಡಿಗಳನ್ನು ಮುಚ್ಚಲು ಕಾಮಗಾರಿ ಆದೇಶಗಳನ್ನು ನೀಡಲಾಗಿದೆ. ಜೊತೆಗೆ ಕಾಮಗಾರಿಗೆ ಪೈಥಾನ್ ಯಂತ್ರವನ್ನು ನೀಡಲಾಗಿದೆ ಎಂದು ಅವರು ಹೇಳಿದರು. 576 ಕಿ.ಮೀ ಬಾಕಿ ಉಳಿದ ಕಾಮಗಾರಿ ಅಂತಿಮಗೊಳ್ಳಬೇಕಿದ್ದು, ಬುಧವಾರ ಟೆಂಡರ್ ಆಹ್ವಾನಿಸಲಾಗಿದೆ. ಗುತ್ತಿಗೆದಾರರಿಗೆ ಪಾವತಿ ಮಾಡಲು, ಎಆರ್‌ಟಿಎಸ್, ಹೆಚ್ಚು ಪಾರದರ್ಶಕವಾಗಿ ಪಾವತಿ ವೇಳಾಪಟ್ಟಿಯನ್ನು ನೀಡಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಅದರಂತೆ ಗುತ್ತಿಗೆದಾರರು ಮಾಪನ ಪುಸ್ತಕ, ಮಾಸಿಕ ಬಿಲ್‌ಗಳು, ಟ್ಯಾಗ್ ಮಾಡಿದ ಭಾವಚಿತ್ರಗಳನ್ನು ನ.5 ರೊಳಗೆ ಸಲ್ಲಿಸಬೇಕಾಗುತ್ತದೆ. ಪ್ರತಿ ತಿಂಗಳು ಮತ್ತು ನಂತರ ಬಾಕಿ ಇರುವ ಬಿಲ್ ಅನ್ನು ಪ್ರಕ್ರಿಯೆಗೊಳಿಸಬೇಕು ಮತ್ತು ಒಂದು ವಾರದೊಳಗೆ ಪಾವತಿ ಮಾಡಬೇಕು. ಜುಲೈ 27, 2022 ರಂದು ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ಸೂಚಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT