ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ; ಹೈದರಾಬಾದ್ ಗೆ ಪಯಣ ಬೆಳೆಸಿದ ಮುಖ್ಯಮಂತ್ರಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶನಿವಾರ ಬೆಂಗಳೂರಿನಿಂದ ಬೆಳಗ್ಗೆ ಹೈದರಾಬಾದ್ ಗೆ ಪ್ರವಾಸ ಬೆಳೆಸಿದ್ದಾರೆ, ಅಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶನಿವಾರ ಬೆಂಗಳೂರಿನಿಂದ ಬೆಳಗ್ಗೆ ಹೈದರಾಬಾದ್ ಗೆ ಪ್ರವಾಸ ಬೆಳೆಸಿದ್ದಾರೆ, ಅಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಹೈದರಾಬಾದ್ ಗೆ ತೆರಳುವ ಮುನ್ನ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದು ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಸಾಂದರ್ಭಿಕವಾಗಿ ಭೇಟಿ ಮಾಡಿ ರಾಜ್ಯದ ಕುರಿತು ಮಾತುಕತೆ ನಡೆಸಲು ಪ್ರಯತ್ನಿಸುತ್ತೇನೆ ಎಂದರು.

ಹೈದರಾಬಾದ್ ನಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು, ರಾಜ್ಯಗಳ ನಾಯಕರು ಭಾಗಿಯಾಗಲಿದ್ದಾರೆ. 

ರಾಜ್ಯದ ವಿವಿಧ ನಗರ ಪಾಲಿಕೆಗಳಲ್ಲಿ ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಕಾನೂನು ನಿಯಮಗಳಿಗೆ ಅನುಸಾರವಾಗಿ ಅನುಷ್ಠಾನಗೊಳಿಸಲು ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು ಮತ್ತು ಪೌರಕಾರ್ಮಿಕರ ಪ್ರತಿನಿಧಿಗಳ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ನಿನ್ನೆ ನಡೆದ ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿದ ಬೊಮ್ಮಾಯಿ, ಪ್ರಸ್ತಾವಿತ ಸಮಿತಿಯು ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಪೌರಕಾರ್ಮಿಕರು ಸಾಮಾಜಿಕ ಘನತೆ ಮತ್ತು ಭದ್ರತೆಗೆ ಅರ್ಹರು. ರಾಜ್ಯ ಸರಕಾರ ಮಾನವೀಯ ಧೋರಣೆಯೊಂದಿಗೆ ಅವರ ಸಂಕಷ್ಟಗಳಿಗೆ ಸ್ಪಂದಿಸಲಿದೆ. ಅವರ ಮಾಸಿಕ ಸಂಭಾವನೆಯನ್ನು 2,000 ರೂಪಾಯಿ ಹೆಚ್ಚಿಸಲಾಗಿದೆ ಎಂದು ಹೇಳಿದರು. ಪೌರಕಾರ್ಮಿಕರ ನೇಮಕಾತಿಯನ್ನು ಸರಳಗೊಳಿಸಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲಾಗುವುದು ಎಂದು ಕೂಡ ತಿಳಿಸಿದರು. 

ಸಿಎಂ ಲಿಖಿತ ಭರವಸೆ ನೀಡಬೇಕು: ಪೌರಕಾರ್ಮಿಕರಿಗೆ ವಸತಿ ಸಾಲ ಸೌಲಭ್ಯ ನೀಡಲಾಗುವುದು, ಅವರ ಮಕ್ಕಳನ್ನು ವಿದ್ಯಾ ನಿಧಿ ವಿದ್ಯಾರ್ಥಿವೇತನ ಯೋಜನೆಗೆ ಒಳಪಡಿಸಲಾಗುವುದು. ಮಹಿಳಾ ಪೌರಕಾರ್ಮಿಕರಿಗೆ ಹೆರಿಗೆ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು. ಆದರೆ, ಧರಣಿ ಹಿಂಪಡೆಯಲು ಸಿಎಂ ಲಿಖಿತ ಭರವಸೆ ನೀಡಬೇಕು ಎಂದು ಪ್ರತಿಭಟನಾನಿರತ ಪೌರಕಾರ್ಮಿಕರು ಒತ್ತಾಯಿಸುತ್ತಿದ್ದು, ಅಲ್ಲಿಯವರೆಗೂ ತಮ್ಮ ಅಹೋರಾತ್ರಿ ಧರಣಿಯನ್ನು ಮುಂದುವರಿಸಲಿದ್ದಾರೆ. 

ಪ್ರತಿಭಟನೆಯನ್ನು ಬೆಂಬಲಿಸಿರುವ ಎಐಸಿಸಿಟಿಯ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಪಿ ಪಿ ಅಪ್ಪಣ್ಣ ಅವರು ಮುಷ್ಕರವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ''ಪ್ರತಿಭಟನೆ ಮುಂದುವರಿಯಲಿದೆ. ಸರ್ಕಾರದಿಂದ ಲಿಖಿತವಾಗಿ ಬರದ ಹೊರತು ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ' ಎಂದು ತಿಳಿಸಿದರು. 

ಇಂದು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನೂರಾರು ಪೌರಕಾರ್ಮಿಕರು ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆ ನೇತೃತ್ವ ವಹಿಸಿರುವ ಕರ್ನಾಟಕ ರಾಜ್ಯ ನಗರ ಪಾಲಿಕೆ, ಗ್ರಾಮ ಸಭೆಗಳು ಹಾಗೂ ಪಟ್ಟಣ ಪಂಚಾಯತ ಪೌರಕಾರ್ಮಿಕ ಮಹಾ ಸಂಘದ ಅಧ್ಯಕ್ಷ ಶಿವಣ್ಣ ಮೈಸೂರು ಮಾತನಾಡಿ, ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಕಸ ತುಂಬುವವರು, ಕ್ಲೀನರ್‌ಗಳು, ಚಾಲಕರು ಮತ್ತು ಒಳಚರಂಡಿ ಕಾರ್ಮಿಕರಿಗೆ ಸೇವೆ ಕಾಯಂ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು. 

ಕರ್ನಾಟಕದಾದ್ಯಂತ ಪೌರಕಾರ್ಮಿಕರು ಸಿಎಂಗೆ ಬಹಿರಂಗ ಪತ್ರ ಬರೆದು ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಶಾಶ್ವತ ಸ್ಥಾನಮಾನ, ಉತ್ತಮ ಕೆಲಸದ ಸ್ಥಿತಿಗತಿಗಳು, ಮನೆ, ಆರೋಗ್ಯ ಮತ್ತು ಅವರ ಮಕ್ಕಳಿಗೆ ಶಿಕ್ಷಣ ಸೇರಿದಂತೆ ಕೆಲವು ಬೇಡಿಕೆಗಳನ್ನು ಸಿಎಂಗೆ ಸಲ್ಲಿಸಲಾಗಿದೆ.

ಸಮಸ್ಯೆ ಇಲ್ಲ: ಬಿಬಿಎಂಪಿ
ನಿನ್ನೆ ನಡೆದ ಮುಷ್ಕರದಿಂದ ಬೆಂಗಳೂರಿನಲ್ಲಿ ಕಸ, ತ್ಯಾಜ್ಯ ಸಂಗ್ರಹದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಿಲ್ಲ ಎಂದು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ಆಯುಕ್ತ ಹರೀಶ್ ಕುಮಾರ್ ತಿಳಿಸಿದ್ದಾರೆ. 4,200 ಟನ್ ಘನ ಆರ್ದ್ರ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT