ಯಶವಂತ್ ಸಿನ್ಹಾ 
ರಾಜ್ಯ

ರಾಷ್ಟ್ರಪತಿ ಚುನಾವಣೆ: ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಬೆಂಗಳೂರಿಗೆ ಆಗಮನ, ಕಾಂಗ್ರೆಸ್ ಮುಖಂಡರಿಂದ ಸ್ವಾಗತ

ರಾಷ್ಟ್ರಪತಿ ಚುನಾವಣೆಯ ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಶನಿವಾರ ಸಂಜೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯ ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಶನಿವಾರ ಸಂಜೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. 84 ವರ್ಷದ ಮಾಜಿ ಕೇಂದ್ರ ಸಚಿವರನ್ನು ವಿಧಾನಪರಿಷತ್ ಮುಖ್ಯ ವಿಪ್ ಪ್ರಕಾಶ್ ರಾಥೋಡ್, ಕೆಪಿಸಿಸಿ ಉಪಾಧ್ಯಕ್ಷ ಅಶೋಕ್ ಪಟ್ಠಣ್ ಮತ್ತಿತರರು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಶವಂತ್ ಸಿನ್ಹಾ ಪಾಲ್ಗೊಳ್ಳಲಿದ್ದು, ಶಾಸಕರು, ಸಂಸದರಿಂದ ಮತ ಯಾಚಿಸಲಿದ್ದಾರೆ. ನಗರದ ಹೋಟೆಲ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ನಮ್ಮ ಸರ್ಕಾರ ಬೀಳಿಸಿ ನೋಡಿ, ನಿಮ್ಮನ್ನೇ ಅಧಿಕಾರದಿಂದ ಕೆಳಗಿಳಿಸುತ್ತೇವೆ: ಪ್ರಧಾನಿ ಮೋದಿಗೆ ಕೆಸಿಆರ್ ಸವಾಲು
ಭಾನುವಾರ ಸಂಜೆ 4 ಗಂಟೆಗೆ ದೆಹಲಿಗೆ ಯಶವಂತ ಸಿನ್ಹಾ ತೆರಳಲಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರನ್ನು ಯಶವಂತ್ ಸಿನ್ಹಾ ಭೇಟಿಯಾಗಲಿದ್ದಾರೆಯೇ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 

ತೆಲಂಗಾಣದಲ್ಲಿ ಅದ್ಬುತ ಸಂವಾದ ನಂತರ ಬೆಂಗಳೂರಿಗೆ ಆಗಮಿಸಿದ್ದೇನೆ. ಭಾನುವಾರ ಕಾಂಗ್ರೆಸ್ ಪಕ್ಷದ ಶಾಸಕರೊಂದಿಗೆ ಸಮಯ ಕಳೆಯಲಿದ್ದೇನೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಮಿಷನ್ ಮುಂದುವರೆಯಲಿದೆ ಎಂದು ಯಶವಂತ್ ಸಿನ್ಹಾ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Sonam Wangchuk Arrested: NSA ಅಡಿ ಕೇಸ್; ಜಾಮೀನು ಸಿಗುವ ಸಾಧ್ಯತೆಯೇ ಇಲ್ಲ!

ಜಾತಿ ಗಣತಿ: ಇಲ್ಲಿಯವರೆಗೆ ಕೇವಲ ಶೇ.2 ರಷ್ಟು ಪ್ರಗತಿ; ಪ್ರತಿದಿನ ಶೇ.10 ರಷ್ಟು ಸಮೀಕ್ಷೆಗೆ ಸಿಎಂ ಸೂಚನೆ; ಗಡುವಿನೊಳಗೆ ಪೂರ್ಣ!

Asia Cup 2025: Indian Army ಕುರಿತು ವ್ಯಂಗ್ಯ, ಪಾಕ್ ಕ್ರಿಕೆಟಿಗ Haris Rauf ಗೆ ಬರೆ ಹಾಕಿದ ICC, ದಂಡ, ಫರ್ಹಾನ್ ಗೂ ಎಚ್ಚರಿಕೆ!

'I Love Muhammed' row: ಬರೇಲಿಯ ಮಸೀದಿ ಹೊರಗೆ ಸ್ಥಳೀಯ ಮುಸ್ಲಿಮರು, ಪೊಲೀಸರ ನಡುವೆ ಭಾರಿ ಘರ್ಷಣೆ! ಕಾರಣವೇನು?

Asia Cup 2025: ರಾಜಕೀಯ ಹೇಳಿಕೆ ಹಿನ್ನೆಲೆ, ಸೂರ್ಯ ಕುಮಾರ್ ಯಾದವ್ ಗೆ ICC ದಂಡ!

SCROLL FOR NEXT