ಎಟಿಎಂ ನಲ್ಲಿ ವೃದ್ಧನಿಗೆ ವಂಚನೆ (ಸಾಂಕೇತಿಕ ಚಿತ್ರ) 
ರಾಜ್ಯ

ಬೆಂಗಳೂರು: ಎಟಿಎಂ ನಲ್ಲಿ ಸಹಾಯ ಮಾಡಿದ ವ್ಯಕ್ತಿಯಿಂದ ನಿವೃತ್ತ ಸರ್ಕಾರಿ ನೌಕರನಿಗೆ 8.5 ಲಕ್ಷ ರೂಪಾಯಿ ವಂಚನೆ!

ನಿವೃತ್ತ ಸರ್ಕಾರಿ ನೌಕರರೊಬ್ಬರಿಗೆ ಎಟಿಎಂ ನಲ್ಲಿ ಹಣ ತೆಗೆಯಲು ಸಹಾಯ ಮಾಡಿದ್ದ ವ್ಯಕ್ತಿಯೋರ್ವ ಡೆಬಿಟ್ ಕಾರ್ಡ್ ನ್ನು ಬದಲು ಮಾಡಿ ವೃದ್ಧರ ಖಾತೆಯಿಂದ 8.5 ಲಕ್ಷ ರೂಪಾಯಿ ವಂಚಿಸಿದ್ದಾನೆ. 

ನಿವೃತ್ತ ಸರ್ಕಾರಿ ನೌಕರರೊಬ್ಬರಿಗೆ ಎಟಿಎಂ ನಲ್ಲಿ ಹಣ ತೆಗೆಯಲು ಸಹಾಯ ಮಾಡಿದ್ದ ವ್ಯಕ್ತಿಯೋರ್ವ ಡೆಬಿಟ್ ಕಾರ್ಡ್ ನ್ನು ಬದಲು ಮಾಡಿ ವೃದ್ಧರ ಖಾತೆಯಿಂದ 8.5 ಲಕ್ಷ ರೂಪಾಯಿ ವಂಚಿಸಿದ್ದಾನೆ. 

ಎಂ.ಜಿ ರಾಮಕೃಷ್ಣ ಗೌಡ (60) ಇತ್ತೀಚೆಗಷ್ಟೇ ಎಟಿಎಂ ಕಿಯೋಸ್ಕ್ ಗೆ ಹಣ ತೆಗೆಯಲು ಹೋದಾಗ 8.54 ಲಕ್ಷ ರೂಪಾಯಿ ಇರಬೇಕಿದ್ದ ಹಣದ ಜಾಗದಲ್ಲಿ 529 ರೂಪಾಯಿಗಳಿದ್ದದ್ದನ್ನು ಕಂಡು ಅಘಾತಕ್ಕೊಳಗಾಗಿದ್ದರು.

ಯಲಹಂಕ 4 ನೇ ಬ್ಲಾಕ್ ನ ನಿವಾಸಿಯಾದ ರಾಮಕೃಷ್ಣ ತಕ್ಷಣವೇ ಬ್ಯಾಂಕ್ ನ್ನು ಸಂಪರ್ಕಿಸಿದಾಗ ಅವರ ಬಳಿ ಇರುವ ಡೆಬಿಟ್ ಕಾರ್ಡ್ ಬ್ಯಾಂಕ್ ನಿಂದ ನೀಡಿರುವುದು ಅಲ್ಲ ಎಂಬ ಮಾಹಿತಿಯನ್ನು ಕೇಳಿ ಮತ್ತೂ ಆಘಾತಕ್ಕೊಳಗಾಗಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಖಾತೆಯಿಂದ ಮೇ.21 ರಿಂದ ಜೂ.13 ವರೆಗೆ ಹಲವು ವಹಿವಾಟುಗಳಲ್ಲಿ ಹಣ ತೆಗೆಯಲಾಗಿದೆ ಎಂಬ ಮಾಹಿತಿ ಬ್ಯಾಂಕ್ ನಿಂದ ಬಂದಿತ್ತು. 

ಆಗಲೇ ಎಂ.ಜಿ ರಾಮಕೃಷ್ಣ ಗೌಡ ಅವರಿಗೆ ಯಲಹಂಕಾದಲ್ಲಿ ಮೇ.21 ರಂದು ಡೆಬಿಟ್ ಕಾರ್ಡ್ ನ ಹೊಸ ಪಿನ್ ರಚಿಸಲು ತಾವು ಎಟಿಎಂ ಕಿಯೋಸ್ಕ್ ಗೆ ತೆರಳಿದ್ದಾಗ ಸಹಾಯ ಮಾಡಿದ್ದ ವ್ಯಕ್ತಿ ನೆನಪಾಗಿದ್ದ. 

ಎಟಿಎಂ ನ ಕಿಯೋಸ್ಕ್ ನಲ್ಲಿ ಎಟಿಎಂ ಡೆಬಿಟ್ ಕಾರ್ಡ್ ನ ಪಿನ್ ರಚಿಸುವ ಪ್ರಕ್ರಿಯೆ ತಿಳಿಯದ ಕಾರಣ, ಅಲ್ಲೇ ಕಿಯೋಸ್ಕ್ ಒಳಭಾಗದಲ್ಲಿದ್ದ ವ್ಯಕ್ತಿಯೋರ್ವನಿಂದ ಸಹಾಯ ಪಡೆದಿದ್ದರು. ವಂಚಕನಾಗಿದ್ದ ಆತ ರಾಮಕೃಷ್ಣ ಗೌಡರಿಗೆ ಪಿನ್ ರಚಿಸುವುದಷ್ಟೇ ಅಲ್ಲದೇ 40,000 ರೂಪಾಯಿ ಹಣ ತೆಗೆಯಲೂ ಸಹಾಯ ಮಾಡಿದ್ದರು.

ಈ ವೇಳೆ ಡೆಬಿಟ್ ಕಾರ್ಡ್ ಹಿಂತಿರುಗಿ ನೀಡುವಾಗ ತನ್ನ ಬಳಿ ಇದ್ದ ಕಾರ್ಡ್ ನ್ನು ನೀಡಿ ಅವರ ಕಾರ್ಡ್ ನ್ನು ತಾನು ಪಡೆದಿದ್ದಾನೆ. ರಾಮಕೃಷ್ಣ ಗೌಡ ಅವರು ಈ ಘಟನೆ ನೆನಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅವರು ನೀಡಿದ್ದ ದೂರಿನ ಆಧಾರದಲ್ಲಿ ಈಶಾನ್ಯ ಸಿಇಎನ್ ಪೊಲೀಸರು ಅಟ್ಟೂರ್ ಲೇಔಟ್ ನ ನಿವಾಸಿ ಮಲ್ಲಿನಾಥ ಅಂಗಡಿ (32) ಎಂಬಾತನನ್ನು ಬಂಧಿಸಿದ್ದು,  ನಾಲ್ಕು ಬಳೆ, ಮೂರು ಉಂಗುರಗಳೂ ಸೇರಿದಂತೆ ತನ್ನ ಕುಟುಂಬ ಸದಸ್ಯರಿಗೆಂದು ಖರೀದಿಸಿದ್ದ ಹಲವು ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಈಶಾನ್ಯ ಡಿಸಿಪಿ ಅನೂಪ್ ಎ ಶೆಟ್ಟಿ, ಎಟಿಎಂ ಕೇಂದ್ರಗಳಿಂದ ಹಣ ತೆಗೆಯುವಾಗ ಎಚ್ಚರಿಕೆಯಿಂಡ ಇರಬೇಕೆಂದು ಜನತೆಗೆ ಕರೆ ನೀಡಿದ್ದಾರೆ. ಎಟಿಎಂ ಕಿಯೋಸ್ಕ್ ಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಗಳನ್ನು ಯಾರಿಗೂ ಹಸ್ತಾಂತರಿಸಬೇಡಿ, ಪಿನ್ ಹಾಕುವಾಗ ನಿಮ್ಮನ್ನು ಯಾರೂ ಗಮನಿಸುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ, ಪ್ರತಿ ವಹಿವಾಟು ನಡೆದಾಗಲೂ ಎಸ್ಎಂಎಸ್ ಅಲರ್ಟ್ ಬರುವಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT