ಸಕಲೇಶಪುರ ಸಮೀಪದ ಹೊಳೆ ಮಲ್ಲೇಶ್ವರ ದೇವಸ್ಥಾನ ಹೇಮಾವತಿ ನದಿ ನೀರಿನಲ್ಲಿ ಮುಳುಗಿದೆ 
ರಾಜ್ಯ

ಕಾಫಿನಾಡು ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ, ದಕ್ಷಿಣ ಕನ್ನಡ ಗಡಿಭಾಗದಲ್ಲೂ ಮುಂದುವರಿದ ವರ್ಷಧಾರೆ

ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಕೂಡ ಸತತ ಮಳೆಯಾಗುತ್ತಿದೆ. ಆಷಾಢ ಮಳೆ ಕಾಫಿನಾಡು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹದ ಭೀತಿ ಎದುರಾಗಿದೆ. 

ಮಡಿಕೇರಿ: ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಕೂಡ ಸತತ ಮಳೆಯಾಗುತ್ತಿದೆ. ಆಷಾಢ ಮಳೆ ಕಾಫಿನಾಡು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹದ ಭೀತಿ ಎದುರಾಗಿದೆ. 

ಹಾರಂಗಿ ಜಲಾಶಯವು ಭರ್ತಿಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಎಂ. ಪಿ. ಅಪ್ಪಚ್ಚುರಂಜನ್ ಬಾಗಿನ ಅರ್ಪಿಸಿದ್ದಾರೆ. ಕೇವಲ ಮಳೆಯೊಂದೇ ಸುರಿಯುವುದಾಗಿದ್ದರೆ, ಜನರು ಅದಕ್ಕೆ ಹೆದರುತ್ತಿರಲಿಲ್ಲ. ಮಳೆಯ ಜೊತೆಗೆ ಭೂಮಿ ಕಂಪಿಸುತ್ತಿದೆ. 

2018ರ ನಂತರ ಕೊಡಗಿನ ಜನರಿಗೆ ಭಾರೀ ಮಳೆಯಾದರೆ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲೂ ಭಾರಿ ಮಳೆ ಮಳೆ ಬಿರುಸು ಪಡೆದುಕೊಳ್ಳುತ್ತಿದ್ದು, ಕಳೆದ ಒಂದು ದಿನದ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 53.01 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ 779.73 ಮಿ. ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 946.74 ಮಿ. ಮೀ ಮಳೆಯಾಗಿದೆ. ಮಡಿಕೇರಿ, ವಿರಾಜಪೇಟೆಯಲ್ಲಿ ಭಾರೀ ಮಳೆಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT