ನಾಲ್ಕು ದಿನಗಳ ಹಿಂದೆ ಮಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ನೀರು ತುಂಬಿಕೊಂಡಿರುವುದು 
ರಾಜ್ಯ

ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮುಂದುವರಿದ ಮಳೆ: ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸೋಮವಾರ ಕೂಡ ಭಾರೀ ಮಳೆ ಮುಂದುವರಿದಿದೆ. ಬೆಳ್ತಂಗಡಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೂಚನೆ ಮೇರೆಗೆ ತಹಶಿಲ್ದಾರ್ ರಜೆ ನೀಡಿದ್ದಾರೆ. 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸೋಮವಾರ ಕೂಡ ಭಾರೀ ಮಳೆ ಮುಂದುವರಿದಿದೆ. ಬೆಳ್ತಂಗಡಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೂಚನೆ ಮೇರೆಗೆ ತಹಶಿಲ್ದಾರ್ ರಜೆ ನೀಡಿದ್ದಾರೆ. 

ಸುಳ್ಯ ತಾಲ್ಲೂಕಿನ ಕಡಬ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮಳೆ ಅವಾಂತರ ಮುಂದುವರಿದೆ. ಹಲವೆಡೆ ಮಣ್ಣು ಕುಸಿತ ಮುಂದುವರಿದಿದೆ. ಹಲವು ಕಡೆ ಮರಗಳು ಧರೆಗುರುಳಿವೆ. ಉತ್ತರ ಕನ್ನಡದ ಭಟ್ಕಳ, ಹೊನ್ನಾವರ, ಅಂಕೋಲ, ಜೋಯಿಡಾ, ಕುಮಟಾ, ಕಾರವಾರ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಎರಡು ದಿನಗಳಿಂದ ಕೊಂಚ ಬಿಡುಗಡೆಗೊಂಡಿದ್ದ ಮಳೆ ಇಂದು ಮತ್ತೆ ಹೆಚ್ಚಾಗಿದೆ. ಇನ್ನೂ ಎರಡು-ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. 

ಚಿಕ್ಕಮಗಳೂರು ಜಿಲ್ಲೆಯ ಕಳಸ ಬಳಿಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೊಡಗಿನಲ್ಲಿ ಮಳೆಯಿಂದ ಮಡಿಕೇರಿ ತಾಲ್ಲೂಕಿನ ಭಾಗಮಂಡಲ-ನಾಪೊಕ್ಲು ರಸ್ತೆ ಜಲಾವೃತವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು