ಏರ್ ಇಂಡಿಯಾ ವಿಮಾನ 
ರಾಜ್ಯ

ಹವಾಮಾನ ವೈಪರೀತ್ಯ: ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಡೈವರ್ಟ್!

ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಮಂಗಳವಾರ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಬೆಂಗಳೂರಿಗೆ ತಿರುಗಿಸಲಾಗಿದೆ.

ಬೆಂಗಳೂರು: ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಮಂಗಳವಾರ ಹವಾಮಾನ ವೈಪರೀತ್ಯದಿಂದ ಬೆಂಗಳೂರಿಗೆ ತಿರುಗಿಸಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಳಂಬವಾಗಿ ಮಧ್ಯಾಹ್ನ 3 ಗಂಟೆಗೆ ಟೇಕಾಫ್ ಆಯಿತು.

ಸೋಮವಾರ ರಾತ್ರಿ 10.30ಕ್ಕೆ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನ ಮಂಗಳವಾರ ಬೆಳಗ್ಗೆ 5.25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ಮಂಗಳೂರಿನಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗದೆ ಬೆಳಗ್ಗೆ 8 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿತ್ತು. 

ಅಂತಿಮವಾಗಿ ಅದು ಕೆಐಎಯಿಂದ ಮಧ್ಯಾಹ್ನ 2.57 ಕ್ಕೆ ಹೊರಟು, ನಿಗದಿತ ಆಗಮನದ ಸಮಯಕ್ಕಿಂತ 9.5 ಗಂಟೆಗಳ ತಡವಾಗಿ 3.35ಕ್ಕೆ ಸುರಕ್ಷಿತವಾಗಿ ಮಂಗಳೂರಿನಲ್ಲಿ ಲ್ಯಾಂಡ್ ಆಯಿತು.

"ಹವಾಮಾನದ ಕಾರಣದಿಂದ ವಿಮಾನ ವಿಳಂಬವಾಗಿದೆ. ಪ್ರಯಾಣಿಕರಿಗೆ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟವನ್ನು ಒದಗಿಸಲಾಗಿದೆ ಮತ್ತು ಅವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿದ್ದ ಅವಧಿಯಲ್ಲಿ ಉತ್ತಮ ಕಾಳಜಿ ವಹಿಸಲಾಗಿದೆ" ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT