ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಉದ್ಯೋಗ ಸೃಜನೆ, ಕೌಶಲ್ಯಾಭಿವೃದ್ಧಿ ಉತ್ತೇಜಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ನೂತನ ಉದ್ಯೋಗ ನೀತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ನೂತನ ಉದ್ಯೋಗ ನೀತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ಕೈಗಾರಿಕಾ ನೀತಿಯಲ್ಲಿ ಉದ್ಯೋಗ ಸೃಜನೆ ಹೆಚ್ಚಾಗಿ ಮಾಡುವ ವಸ್ತ್ರೋದ್ಯಮ ಎಫ್ ಎಂಸಿಜಿ ಮತ್ತಿತರ ಹೆಚ್ಚಿನ ಮಾನವ ಸಂಪನ್ಮೂಲ ಬೇಡಿಕೆ ಇರುವ ಉದ್ಯಮಗಳಿಗೆ ಪ್ರೋತ್ಸಾಹ ನೀಡುವಂತೆ ಸೂಚಿಸಿದರು. ಇದರೊಂದಿಗೆ ಕೈಗಾರಿಕೋದ್ಯಮಗಳಲ್ಲಿ ಬೇಡಿಕೆ ಇರುವ ಕ್ಷೇತ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಮತ್ತಷ್ಟು ಹೆಚ್ಚಿಸಲು ಸೂಚಿಸಿದರು.

ಕೌಶಲ್ಯಾಭಿವೃದ್ಧಿ ತರಬೇತಿಯನ್ನು ವಿಕೇಂದ್ರೀಕರಣಗೊಳಿಸಬೇಕು. ಪ್ರತಿ ಐಟಿಐ, ಜಿಟಿಟಿಸಿಗಳಲ್ಲಿ ಅಲ್ಪಾವಧಿ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು, ಗುಣಮಟ್ಟದ ಪ್ರಾಯೋಗಿಕ ಅನುಭವ ನೀಡುವ ತರಬೇತಿ ನೀಡಲು ಕ್ರಮ ವಹಿಸಬೇಕು ಎಂದರು.

ರಾಜ್ಯದಲ್ಲಿ ಈಗಾಗಲೇ ಉನ್ನತೀಕರಿಸಿದ ಐಟಿಐಗಳು ಹಾಗೂ ಜೆಟಿಟಿಸಿಗಳಲ್ಲಿ ಅಲ್ಪಾವಧಿಯ ಕೌಶಲ್ಯಾಭಿವೃದ್ಧಿ ತರಬೇತಿ ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿ ಸಲಹೆ ನೀಡಿದರು. ಇದರೊಂದಿಗೆ ಈಗಾಗಲೇ ಅಸ್ತಿತ್ವದಲ್ಲಿರುವ ಕೈಗಾರಿಕೋದ್ಯಮಗಳು ಕೌಶಲ್ಯಾಭಿವೃದ್ಧಿ ತರಬೇತಿ ನಡೆಸಲು ಉತ್ತೇಜನ ನೀಡುವಂತೆ ಸಲಹೆ ನೀಡಿದರು.

ಉದ್ಯೋಗ ನೀತಿಯು ಉದ್ಯೋಗ ಸೃಜನೆ ಹಾಗೂ ಕುಶಲ ಮಾನವ ಸಂಪನ್ಮೂಲ ಸೃಜನೆಗೆ ಪೂರಕವಾಗುವಂತೆ ರೂಪಿಸಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ನೀತಿಯನ್ನು ಅನುಮೋದನೆಗಾಗಿ ಸಲ್ಲಿಸುವಂತೆ ಸೂಚಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?