ಕೇಶವ ಮೂರ್ತಿ 
ರಾಜ್ಯ

ಕುರಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು

ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೋಲಾರ ಪೊಲೀಸರು ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕೋಲಾರ: ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೋಲಾರ ಪೊಲೀಸರು ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಅಹಮದ್ ಅವರು ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ದೂರು ನೀಡಿದ್ದರು.

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿರೋಧಿಸಿ ಜುಲೈ 1 ರಂದು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಭಾಷಣದಲ್ಲಿ ಕೇಶವ ಮೂರ್ತಿ “ಕುರಾನ್ ಜನರನ್ನು ಕೊಲ್ಲು ಎಂದು ಹೇಳುತ್ತದೆ. ಆದ್ದರಿಂದ ಕುರಾನ್ ಅನ್ನು ಓದುವವರು ಅದನ್ನು ಅನುಸರಿಸುತ್ತಾರೆ ಎಂದು ನೀವು ಭಾವಿಸುವುದಿಲ್ಲವೇ? ಕುರಾನ್ ಓದುವವರು ಭಯೋತ್ಪಾದಕರು” ಎಂದು ಹೇಳಿದ್ದರೆನ್ನಲಾಗಿದೆ.

ಕೇಶವ ಮೂರ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ(ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 295 ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಕಳೆದ ತಿಂಗಳು ಇಬ್ಬರು ವ್ಯಕ್ತಿಗಳು ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT