ಬಸವರಾಜ ಬೊಮ್ಮಾಯಿ 
ರಾಜ್ಯ

ಕವಿ ಸರ್ವಜ್ಞ ಹುಟ್ಟೂರಿನ ಮನೆ, ಸಮಾಧಿ ಸ್ಥಳ ಅಭಿವೃದ್ಧಿಗೆ ಸರ್ಕಾರದ ಅನುಮೋದನೆ

ಕವಿ ಸರ್ವಜ್ಞನ ಹುಟ್ಟೂರಾದ ಹಾವೇರಿ ಜಿಲ್ಲೆಯ ಅಬಲೂರಿನಲ್ಲಿ ಅವರ ತಂದೆ ತಾಯಿಯ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಿದೆ.

ಬೆಂಗಳೂರು: ಕವಿ ಸರ್ವಜ್ಞನ ಹುಟ್ಟೂರಾದ ಹಾವೇರಿ ಜಿಲ್ಲೆಯ ಅಬಲೂರಿನಲ್ಲಿ ಅವರ ತಂದೆ ತಾಯಿಯ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಿದೆ.

ಇದರ ಜೊತೆಗೆ ಹಿರೇಕೆರೂರು ಪಟ್ಟಣದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಬಲೂರಿನಲ್ಲಿ ಅವರು ವಾಸವಿದ್ದ ಮನೆಯ ಸ್ಥಳ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಅಗತ್ಯವಿರುವ ಖಾಸಗಿ ಜಮೀನು ಖರೀದಿಸಲು ಒಪ್ಪಿಗೆ ನೀಡಲಾಯಿತು.

ಇದರೊಂದಿಗೆ ಸರ್ವಜ್ಞ ಪ್ರಾಧಿಕಾರದಿಂದ 25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಮುಖಾಂತರ ಕೈಗೊಳ್ಳುವಂತೆ ಸೂಚಿಸಿದರು. ಇದರೊಂದಿಗೆ ಸರ್ವಜ್ಞರ ನೆನಪಿಗೆ ರೂಪಿಸುವ ಯೋಜನೆಗಳನ್ನು ಅರ್ಥಪೂರ್ಣವಾಗಿ ಹಾಗೂ ಆಯಾ ವಿಷಯಗಳ ಪರಿಣತರೊಂದಿಗೆ ಸಮಾಲೋಚನೆ ನಡೆಸಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಶಿಥಿಲಾವಸ್ಥೆಯಲ್ಲಿದ್ದ ಸವಣೂರು ನವಾಬರ ಅರಮನೆ ಪುನರುಜ್ಜೀವನ ಕಾರ್ಯ ಪೂರ್ಣಗೊಂಡಿದ್ದು, ಇಲ್ಲಿ ಸ್ಥಳೀಯ ಇತಿಹಾಸವನ್ನು ನೆನಪಿಸುವ ವಸ್ತುಸಂಗ್ರಹಾಲಯ ಸ್ಥಾಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.ಆರು ತಿಂಗಳಲ್ಲಿ ವಸ್ತು ಸಂಗ್ರಹಾಲಯದ ಕೆಲಸ ಪೂರ್ಣಗೊಳಿಸುವಂತೆ ತಿಳಿಸಿದರು.

ಬಸವಣ್ಣನವರ ಐಕ್ಯಸ್ಥಳವಾಗಿರುವ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮವು ಜನಾಕರ್ಷಣೆಯ ಕೇಂದ್ರವಾಗುವ ಜತೆಗೆ ಬಸವ ತತ್ವದ ಅರಿವು ಮೂಡಿಸುವ ತಾಣವೂ ಆಗಬೇಕು. ಇದಕ್ಕೆ ಪೂರಕವಾಗಿ ಸಂಗಮವನ್ನು ಅಭಿವೃದ್ಧಿ ಪಡಿಸಿ ಎಂದು ಸಿಎಂ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT