ಬಸವರಾಜ ಬೊಮ್ಮಾಯಿ 
ರಾಜ್ಯ

ನಿವೃತ್ತ ನೌಕರರಿಗೂ ಆರೋಗ್ಯ ಸಂಜೀವಿನಿ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ನಗದು ರಹಿತ ‘ಆರೋಗ್ಯ ಸಂಜೀವಿನಿ’ ಯೋಜನೆ ಯನ್ನು 4.30 ಲಕ್ಷ ನಿವೃತ್ತರು, 1 ಲಕ್ಷ ಪಿಂಚಣಿದಾರರಿಗೂ ಅನ್ವಯಿಸಲು ಕ್ರಮಕೈಗೊಳ್ಳಲಾಗುವುದು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದರು.

ಬೆಂಗಳೂರು: ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ನಗದು ರಹಿತ ‘ಆರೋಗ್ಯ ಸಂಜೀವಿನಿ’ ಯೋಜನೆ ಯನ್ನು 4.30 ಲಕ್ಷ ನಿವೃತ್ತರು, 1 ಲಕ್ಷ ಪಿಂಚಣಿದಾರರಿಗೂ ಅನ್ವಯಿಸಲು ಕ್ರಮಕೈಗೊಳ್ಳಲಾಗುವುದು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಶುಕ್ರವಾರ ಹಮ್ಮಿಕೊಂಡಿದ್ದ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೌಕರರು ಮತ್ತು ನಿವೃತ್ತರು ಸರ್ಕಾರದ‌ ಎರಡು ಕಣ್ಣು. 6 ಲಕ್ಷ ಸರ್ಕಾರಿ ನೌಕರರನ್ನು ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ನಿವೃತ್ತರಿಗೂ ಈ ಸೌಲಭ್ಯ ಕಲ್ಪಿಸಲಾಗುವುದು ಎಂದರು.

‘ಬಹುತೇಕ ನೌಕರರು ಅಂತಃಕರಣ ಮರೆತಿದ್ದಾರೆ. ಸಹಿ ಹಾಕಿ ಹೋಗುವ ಚಟ ಬೆಳೆಸಿಕೊಂಡ ಕೆಲವರು ಮಾನಸಿಕವಾಗಿ ನಿವೃತ್ತರಾಗಿದ್ದಾರೆ. ಬಡವರು, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಬೇಕು. ಹೃದಯದಲ್ಲಿ ಕರುಣೆ ಇರಬೇಕು‘ ಎಂದು ಕಿವಿಮಾತು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ರಾಜ್ಯದಲ್ಲಿ 4.2 ಲಕ್ಷ ಪಿಂಚಣಿದಾರರಿದ್ದು, 1.5 ಲಕ್ಷ ಕುಟುಂಬ ಪಿಂಚಣಿ (ಮೃತ ನಿವೃತ್ತ ನೌಕರರ ಪತ್ನಿ) ಪಡೆಯುತ್ತಿದೆ. ಉಚಿತ ಆರೋಗ್ಯ ಯೋಜನೆ ಅಡಿ ನೌಕರರು 1,250 ಕಾಯಿಲೆಗಳಿಗೆ ನಗದು ರಹಿತವಾಗಿ ಸೇವೆ ಪಡೆಯಬಹುದಾಗಿದೆ. ನಿವೃತ್ತರಿಗೂ ಯೋಜನೆ ಅನ್ವಯಿಸಬೇಕು ಎಂದು ಕೋರಿದರು.

70 ವರ್ಷ ಮೇಲ್ಪಟ್ಟವರಿಗೆ ಪಿಂಚಣಿಯನ್ನು ಶೇ 10 ರಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು. ಪ್ರಸ್ತುತ, ಕೇಂದ್ರ ಸರ್ಕಾರದ ನಿವೃತ್ತ ನೌಕರರು ಆರೋಗ್ಯ ಯೋಜನೆಯ ಪ್ರಯೋಜನಗಳಿಗೆ ಅರ್ಹರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!