ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕವು 10 ಲಕ್ಷ ಹೆಕ್ಟೇರ್‌ಗೆ ನೀರಾವರಿ ವಿಸ್ತರಿಸುವ ಸಾಮರ್ಥ್ಯ ಹೊಂದಿದೆ: ಗೋವಿಂದ್ ಕಾರಜೋಳ

ಕರ್ನಾಟಕವು 10 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶಕ್ಕೆ ನೀರಾವರಿ ವಿಸ್ತರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನೀರಾವರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.

ಮೈಸೂರು: ಕರ್ನಾಟಕವು 10 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶಕ್ಕೆ ನೀರಾವರಿ ವಿಸ್ತರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನೀರಾವರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.

ನೆರೆಯ ತಮಿಳುನಾಡು ಆಕ್ಷೇಪಣೆಯ ಹೊರತಾಗಿಯೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.

ನೀರು ಹಂಚಿಕೆ ಮಾಡದೆ ಕರ್ನಾಟಕದ ನೀರಾವರಿ ಯೋಜನೆಗಳಿಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕ ಬಜೆಟ್‌ನಲ್ಲಿ ಮೇಕೆದಾಟು ಯೋಜನೆಗೆ 1,000 ಕೋಟಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ಮತ್ತು ಎತ್ತಿನಹೊಳೆ ಯೋಜನೆಗೆ 3,000 ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಕೆಆರ್‌ಎಸ್, ಕಬಿನಿ, ಹಾರಂಗಿ ಮತ್ತು ಚಿಕ್ಕಹೊಳೆ ಅಣೆಕಟ್ಟುಗಳ ತುರ್ತು ಕ್ರಿಯಾ ಯೋಜನೆ ಅನುಷ್ಠಾನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೀರಿನ ಸಂರಕ್ಷಣೆ ಮತ್ತು ಜಲಮೂಲಗಳ ಸಂರಕ್ಷಣೆಯಲ್ಲಿ ಜನರು ಪಾಲ್ಗೋಳ್ಳಬೇಕು ಎಂದು ಹೇಳಿದರು.

ರಾಜ್ಯಾದ್ಯಂತ 231 ದೊಡ್ಡ ಮತ್ತು ಸಣ್ಣ ನೀರಾವರಿ ಅಣೆಕಟ್ಟುಗಳಿದ್ದು, ಇವುಗಳ ಮೂಲಕ 30 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿಗೆ   2,810 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದನ್ನು 10 ಲಕ್ಷ ಹೆಕ್ಟೇರ್‌ಗೆ ವಿಸ್ತರಿಸಬಹುದು ಎಂದು ಕಾರಜೋಳ ಹೇಳಿದರು.

ರಾಜ್ಯವು 64 ಲಕ್ಷ ಹೆಕ್ಟೇರ್ ಕೃಷಿ ಭೂಮಿಯನ್ನು ಹೊಂದಿದೆ ಮತ್ತು ನೀರಾವರಿ ಪ್ರದೇಶದ ಹೆಚ್ಚಳವು ರೈತ ಸಮುದಾಯವನ್ನು ಸಬಲಗೊಳಿಸುತ್ತದೆ ಮತ್ತು ಆಹಾರ ಉತ್ಪಾದನೆಗೆ ಮತ್ತಷ್ಟು ಕೊಡುಗೆ ನೀಡುತ್ತದೆ ಎಂದರು.

ಮೈಸೂರು ಅರಸರನ್ನ ನಾವು ಸ್ಮರಿಸಲೇ ಬೇಕು. ದೇಶದ ಅಭಿವೃದ್ಧಿಯಲ್ಲಿ ಮುಂಚೂಣೆಯಲ್ಲಿ ಇರುವವರು ನಾಲ್ವಡಿ ಕೃಷ್ಣರಾಜ ಒಡೆಯರ್, ನೀರಾವರಿ, ಶಿಕ್ಷಣ, ಔದ್ಯೋಗಿಕ ಕ್ಷೇತ್ರದ ಸಾಧನೆ ಮೈಲಿಗಲ್ಲು. ಅದನ್ನ ಉಳಿಸಿಕೊಂಡು ಹೋಗುವುದೇ ನಮ್ಮ ಸಾಮಾಜಿಕ ಹೊಣೆಗಾರಿಕೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ

Asia Cup 2026: ಮೊದಲ ಸೆಮಿಸ್‌ನಲ್ಲಿ ಬಾಂಗ್ಲಾವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತ!

'ವಂದೇ ಮಾತರಂ' ಕಾನೂನಾಗಿದೆ; ತಾಕತ್ತಿದ್ದರೆ ಅಧಿಕಾರಕ್ಕೆ ಬಂದು ಬದಲಾಯಿಸಿ, ನನ್ನ ಅಭ್ಯಂತರವಿಲ್ಲ: ಕಾಂಗ್ರೆಸ್‌ಗೆ ಒಮರ್ ಅಬ್ದುಲ್ಲಾ ತಿರುಗೇಟು!

ಹಿಂಸೆ ಫ್ಯಾಷನ್ ಆಗಿಬಿಟ್ಟಿದೆ: ಮಣಿಪುರಿ ಸಂಗೀತಗಾರನ ಹತ್ಯೆಗೆ ನ್ಯಾಯ ಒದಗಿಸುವುದಾಗಿ ರಾಹುಲ್ ಗಾಂಧಿ ಪ್ರತಿಜ್ಞೆ! Video

ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕಿರಿಯ CJP ಕಾರ್ಯಕರ್ತೆಗೆ ಕಿರುಕುಳ, ಬೆದರಿಕೆ ಹಾಕಿದ್ದಕ್ಕೆ ಸುಪ್ರೀಂ ಕೋರ್ಟ್ ಗರಂ!