ಗೋವಿಂದ ಕಾರಜೋಳ 
ರಾಜ್ಯ

ಒತ್ತುವರಿ ಮಾಡಿಕೊಂಡಿರುವ ಕಾಲುವೆಗಳನ್ನು ತೆರವುಗೊಳಿಸಿ: ರೈತರಿಗೆ ಸಚಿವರ ಒತ್ತಾಯ

ರೈತರು ಮತ್ತು ಜನರು ಜಲಾಶಯದ ತಿರುವುಗಳು, ಫೀಡರ್ ಕಾಲುವೆಗಳು ಮತ್ತು ನೀರಾವರಿ ಕಾಲುವೆಗಳನ್ನು ಅತಿಕ್ರಮಿಸಿದ್ದಾರೆ,  ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ಮೈಸೂರು: ರೈತರು ಮತ್ತು ಜನರು ಜಲಾಶಯದ ತಿರುವುಗಳು, ಫೀಡರ್ ಕಾಲುವೆಗಳು ಮತ್ತು ನೀರಾವರಿ ಕಾಲುವೆಗಳನ್ನು ಅತಿಕ್ರಮಿಸಿದ್ದಾರೆ,  ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ಕೆಆರ್‌ಎಸ್‌ಗೆ ಭೇಟಿ ನೀಡಲಿದ್ದಾರೆ, ಈ ವೇಳೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಹೆಚ್ಚಿನ ಘೋಷಣೆಗಳನ್ನು ಮಾಡಲಿದ್ದಾರೆ ಎಂದು ಸುಳಿವು ನೀಡಿದರು.

ಮೈಸೂರಿನ ಬೇಡಿಕೆಯ ಪ್ರವಾಸಿ ತಾಣವಾದ ಬೃಂದಾವನ ಉದ್ಯಾನದ ಅಭಿವೃದ್ಧಿ ಮತ್ತು ನವೀಕರಣಕ್ಕೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಸಂಗೀತ ಕಾರಂಜಿಗಳನ್ನೂ ಬದಲಾಯಿಸಲಾಗುವುದು ಎಂದರು.

ಹಳೆಯ ಕ್ರೆಸ್ಟ್ ಗೇಟ್‌ಗಳನ್ನು ವಸ್ತುಸಂಗ್ರಹಾಲಯದಲ್ಲಿ ಪ್ರದರ್ಶಿಸಿ, ಒಂದು ಶತಮಾನದ ಹಿಂದೆ ಅಳವಡಿಸಿಕೊಂಡ ತಂತ್ರಜ್ಞಾನವನ್ನು ಜನರಿಗೆ ಅರ್ಥವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.

ಅಣೆಕಟ್ಟು ಸುರಕ್ಷತಾ ಇಲಾಖೆ ನೀರಾವರಿ ಅಧಿಕಾರಿಗಳು ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ಕಾವೇರಿ ನದಿಗೆ ಸಮೀಪವಿರುವ ಗ್ರಾಮಗಳ ಸಾವಿರಾರು ಜನರು ಪ್ರವಾಹಕ್ಕೆ ಸಿಲುಕಿ ಬೆಳೆ, ಆಸ್ತಿ, ಮನೆ ಕಳೆದುಕೊಂಡಿದ್ದಾರೆ. ಮಂಡ್ಯ, ಕೊಪ್ಪಳ, ದೊಡ್ಡಪಾಳ್ಯ, ಚಿಕ್ಕ ಪಾಳ್ಯ, ಗಂಜಾಂ, ಶ್ರೀರಂಗಪಟ್ಟಣ ಪಟ್ಟಣದ ಕೆಲವು ವಾರ್ಡ್‌ಗಳು ಸೇರಿದಂತೆ ಇತರೆಡೆ ಹಾನಿಯಾಗಿದೆ.

ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಾವೇರಿ ನದಿಯ ಉದ್ದಕ್ಕೂ ರಕ್ಷಣಾ ಗೋಡೆಗಳನ್ನು ನಿರ್ಮಿಸುವ ಅಗತ್ಯವಿದೆ ಎಂದು ಶ್ರೀರಂಗ ಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ.  ಕೆಆರ್‌ಎಸ್ ಜಲಾಶಯವು ಸುರಕ್ಷಿತ ಮತ್ತು ಸದೃಢವಾಗಿದೆ ಎಂದು ಹೇಳಿದ ಅವರು,  ಜಲಾಶಯದ ಸುರಕ್ಷತೆಯ ಬಗ್ಗೆ ರೈತರಲ್ಲಿ ಭೀತಿ ಮೂಡಿಸಿರುವ ಸಂಸದೆ ಸುಮಲತಾ ಅವರನ್ನು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT