ಗೋವಿಂದ ಕಾರಜೋಳ 
ರಾಜ್ಯ

ಒತ್ತುವರಿ ಮಾಡಿಕೊಂಡಿರುವ ಕಾಲುವೆಗಳನ್ನು ತೆರವುಗೊಳಿಸಿ: ರೈತರಿಗೆ ಸಚಿವರ ಒತ್ತಾಯ

ರೈತರು ಮತ್ತು ಜನರು ಜಲಾಶಯದ ತಿರುವುಗಳು, ಫೀಡರ್ ಕಾಲುವೆಗಳು ಮತ್ತು ನೀರಾವರಿ ಕಾಲುವೆಗಳನ್ನು ಅತಿಕ್ರಮಿಸಿದ್ದಾರೆ,  ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ಮೈಸೂರು: ರೈತರು ಮತ್ತು ಜನರು ಜಲಾಶಯದ ತಿರುವುಗಳು, ಫೀಡರ್ ಕಾಲುವೆಗಳು ಮತ್ತು ನೀರಾವರಿ ಕಾಲುವೆಗಳನ್ನು ಅತಿಕ್ರಮಿಸಿದ್ದಾರೆ,  ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ಕೆಆರ್‌ಎಸ್‌ಗೆ ಭೇಟಿ ನೀಡಲಿದ್ದಾರೆ, ಈ ವೇಳೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಹೆಚ್ಚಿನ ಘೋಷಣೆಗಳನ್ನು ಮಾಡಲಿದ್ದಾರೆ ಎಂದು ಸುಳಿವು ನೀಡಿದರು.

ಮೈಸೂರಿನ ಬೇಡಿಕೆಯ ಪ್ರವಾಸಿ ತಾಣವಾದ ಬೃಂದಾವನ ಉದ್ಯಾನದ ಅಭಿವೃದ್ಧಿ ಮತ್ತು ನವೀಕರಣಕ್ಕೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಸಂಗೀತ ಕಾರಂಜಿಗಳನ್ನೂ ಬದಲಾಯಿಸಲಾಗುವುದು ಎಂದರು.

ಹಳೆಯ ಕ್ರೆಸ್ಟ್ ಗೇಟ್‌ಗಳನ್ನು ವಸ್ತುಸಂಗ್ರಹಾಲಯದಲ್ಲಿ ಪ್ರದರ್ಶಿಸಿ, ಒಂದು ಶತಮಾನದ ಹಿಂದೆ ಅಳವಡಿಸಿಕೊಂಡ ತಂತ್ರಜ್ಞಾನವನ್ನು ಜನರಿಗೆ ಅರ್ಥವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.

ಅಣೆಕಟ್ಟು ಸುರಕ್ಷತಾ ಇಲಾಖೆ ನೀರಾವರಿ ಅಧಿಕಾರಿಗಳು ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ಕಾವೇರಿ ನದಿಗೆ ಸಮೀಪವಿರುವ ಗ್ರಾಮಗಳ ಸಾವಿರಾರು ಜನರು ಪ್ರವಾಹಕ್ಕೆ ಸಿಲುಕಿ ಬೆಳೆ, ಆಸ್ತಿ, ಮನೆ ಕಳೆದುಕೊಂಡಿದ್ದಾರೆ. ಮಂಡ್ಯ, ಕೊಪ್ಪಳ, ದೊಡ್ಡಪಾಳ್ಯ, ಚಿಕ್ಕ ಪಾಳ್ಯ, ಗಂಜಾಂ, ಶ್ರೀರಂಗಪಟ್ಟಣ ಪಟ್ಟಣದ ಕೆಲವು ವಾರ್ಡ್‌ಗಳು ಸೇರಿದಂತೆ ಇತರೆಡೆ ಹಾನಿಯಾಗಿದೆ.

ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಾವೇರಿ ನದಿಯ ಉದ್ದಕ್ಕೂ ರಕ್ಷಣಾ ಗೋಡೆಗಳನ್ನು ನಿರ್ಮಿಸುವ ಅಗತ್ಯವಿದೆ ಎಂದು ಶ್ರೀರಂಗ ಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ.  ಕೆಆರ್‌ಎಸ್ ಜಲಾಶಯವು ಸುರಕ್ಷಿತ ಮತ್ತು ಸದೃಢವಾಗಿದೆ ಎಂದು ಹೇಳಿದ ಅವರು,  ಜಲಾಶಯದ ಸುರಕ್ಷತೆಯ ಬಗ್ಗೆ ರೈತರಲ್ಲಿ ಭೀತಿ ಮೂಡಿಸಿರುವ ಸಂಸದೆ ಸುಮಲತಾ ಅವರನ್ನು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT