ಸಾಂದರ್ಭಿಕ ಚಿತ್ರ 
ರಾಜ್ಯ

ಅಂತರ್ಜಲ ವೃದ್ಧಿ ಯೋಜನೆಗಳನ್ನು ತ್ವರಿತಗೊಳಿಸಿದ ಸರ್ಕಾರ

ಅಂತರ್ಜಲ ಮಟ್ಟ ಕುಸಿತ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ಬರಪೀಡಿತ ಜಿಲ್ಲೆಗಳಲ್ಲಿ ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಏತ ನೀರಾವರಿ ಯೋಜನೆಗಳನ್ನು...

ಮೈಸೂರು: ಅಂತರ್ಜಲ ಮಟ್ಟ ಕುಸಿತ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ಬರಪೀಡಿತ ಜಿಲ್ಲೆಗಳಲ್ಲಿ ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಬಹುತೇಕ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟವು 1,000-1,200 ಅಡಿಗಿಂತ ಕಡಿಮೆಯಾಗಿದೆ, ರೈತರು ಸಾಕಷ್ಟು ನೀರನ್ನು ಪಂಪ್ ಮಾಡಬಹುದು ಎಂದು ಖಚಿತಪಡಿಸಿಕೊಳ್ಳಲು ಸರ್ಕಾರ ಈ ಯೋಜನೆಗಳನ್ನು ತ್ವರಿತಗೊಳಿಸುತ್ತಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಮೊದಲ ಹಂತದ ಕೆರೆ ತುಂಬಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಬರಪೀಡಿತ ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆ ತಾಲೂಕುಗಳಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ವೃಷಭಾವತಿ ನದಿಯಿಂದ ತುಮಕೂರು ಮತ್ತು ನೆಲಮಂಗಲದ ಕೆರೆಗಳನ್ನು ತುಂಬಿಸಲು 800 ಕೋಟಿ ರೂ.ಗಳ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. 

ಶನಿವಾರ ಮೈಸೂರು ಸಮೀಪದ ಈರಪ್ಪನ ಏತ ನೀರಾವರಿ ಯೋಜನೆ, ಕೊಪ್ಪಳ ಮತ್ತು ಮಿದನಾಪುರದ ಏತ ನೀರಾವರಿ ಯೋಜನೆಗಳನ್ನು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪರಿಶೀಲಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹಲವು ಕೆರೆಗಳಿಗೆ ಕೆಸಿ ವ್ಯಾಲಿಯಿಂದ ಸಂಸ್ಕರಿಸಿದ ನೀರು ತುಂಬಿಸಲಾಗಿದೆ. ಎರಡನೇ ಹಂತದಲ್ಲಿ ಹೆಚ್ಚಿನ ಕೆರೆಗಳನ್ನು ತುಂಬಿಸಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಏಳು ಏತ ನೀರಾವರಿ ಯೋಜನೆಗಳು ಪೂರ್ಣಗೊಂಡಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಕೆರೆಗಳನ್ನು ತುಂಬಿಸಲು ಮತ್ತು ಅಂತರ್ಜಲವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT