ಆಗುಂಹೆ ಘಾಟಿ ಕುಸಿತ 
ರಾಜ್ಯ

ಉಡುಪಿಯಲ್ಲಿ ಭಾರೀ ಮಳೆ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ; ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾಗಿದ್ದು ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಘಾಟಿಯ ನಾಲ್ಕನೆ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಮರಗಳು ಬಿದ್ದಿವೆ.

ಹೆಬ್ರಿ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾಗಿದ್ದು ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಘಾಟಿಯ ನಾಲ್ಕನೆ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಮರಗಳು ಬಿದ್ದಿವೆ.

ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತವಾಗಿದೆ.

ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ ವಾಹನ ಸಂಚಾರ ಬಂದ್ ಆಗಿದ್ದು, ಶಿವಮೊಗ್ಗ ಆಗುಂಬೆಯಿಂದ ಉಡುಪಿಗೆ ಬರುವ ವಾಹನಗಳು ಸಿದ್ಧಾಪುರ ಮೂಲಕ ಬರುತ್ತಿದೆ. ಗುಡ್ಡ ತೆರವು ಕಾರ್ಯ ಅರಂಭವಾಗಿದ್ದರೂ ವಾಹನಗಳ ಸುಗಮ ಸಂಚಾರಕ್ಕೆ ಸಮಯ ಬೇಕಾಗಬಹುದು‌. ನಿರಂತರ ಸುರಿಯುತ್ತಿರುವ ಮಳೆಯಿಂದ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಸುಮಾರು 30 ಮೀಟರ್‌ನಷ್ಟು ಭೂಕುಸಿತ ಉಂಟಾಗಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆಗುಂಬೆ ಘಾಟಿಯಲ್ಲಿ ಗುಡ್ಡ ಜರಿದ ಪರಿಣಾಮ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಂಡಿದೆ. ಪ್ರಯಾಣಿಕರು ಬದಲಿ ರಸ್ತೆ ಉಪಯೋಗಿಸುವುದು ಸೂಕ್ತ ಎಂದು ಜಿಲ್ಲಾಡಳಿತ ತಿಳಿಸಿದೆ.

ರಸ್ತೆ ತೆರವು ಕಾರ್ಯಾಚರಣೆ ಈಗಾಗಲೇ ಆರಂಭವಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಪೊಲೀಸ್ ಹಾಗೂಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?