ಮನೀಶ್ ಮೌದ್ಗಿಲ್ 
ರಾಜ್ಯ

ಮಿನಿಸ್ಟರ್ ಗೋಪಾಲಯ್ಯ ಹೆಸರು ಬಳಸಿ ಐಎಎಸ್‌ ಅಧಿಕಾರಿಗೆ ಬೆದರಿಕೆ ಕರೆ: ಆರೋಪಿ ಬಂಧನ

ಸಚಿವರ ಪಿಎ ಎಂದು ಹಿರಿಯ ಐಎಎಸ್‌ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಗಂಗಾಧರ್ ಎಂಬುವವರನ್ನು ಬಂಧಿಸಲಾಗಿದೆ.

ಬೆಂಗಳೂರು: ಸಚಿವರ ಪಿಎ ಎಂದು ಹಿರಿಯ ಐಎಎಸ್‌ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಗಂಗಾಧರ್ ಎಂಬುವವರನ್ನು ಬಂಧಿಸಲಾಗಿದೆ.

ಅಬಕಾರಿ ಸಚಿವ ಗೋಪಾಲಯ್ಯನವರ ಪರ್ಸನಲ್ ಸೆಕ್ರೆಟರಿ ಎಂದು ಕರೆ ಮಾಡಿ ಗಂಗಾಧರ್ ಬೆದರಿಕೆ ಹಾಕಿದ್ದ. ಐಎಎಸ್‌ ಅಧಿಕಾರಿ ಮುನೀಶ್ ಮೌದ್ಗಿಲ್ ಕಾರು ಚಾಲಕನ ವರ್ಗಾವಣೆ ಸಂಬಂಧ ಕರೆ ಮಾಡಿ ಬೆದರಿಕೆ ಹಾಕಿದಾಗಿ ಪೊಲೀಸರು ತಿಳಿಸಿದ್ದಾರೆ.

ಜುಲೈ 1 ರಂದು ರಾತ್ರಿ 11 ಗಂಟೆಗೆ ಮುನೀಶ್ ಮೌದ್ಗಿಲ್‌ಗೆ ಕರೆ ಮಾಡಿದ್ದ ವ್ಯಕ್ತಿ. ಕಾರು ಚಾಲಕ ಆನಂದ್ ವರ್ಗಾವಣೆ ಮಾಡಿದ್ದಕ್ಕೆ ಕರೆ  ಮಾಡಿ ಬೆದರಿಕೆ ಹಾಕಿದ್ದ . ಈ ವೇಳೆ ತಾನೂ ಅಬಕಾರಿ ಸಚಿವ ಗೋಪಾಲಯ್ಯನವರ ಪರ್ಸನಲ್ ಸೆಕ್ರೆಟರಿ ಎಂದು ಹೇಳಿಕೊಂಡಿದ್ದಾನೆ. ಚಾಲಕ ಆನಂದನನ್ನ ಏಕೆ ವರ್ಗಾವಣೆ ಮಾಡಿದ್ದೀಯಾ ಎಂದು ಜೋರು ಅವಾಜ್ ಹಾಕಿದ್ದಾನೆ.

ಈ ವೇಳೆ ಇದು ಆಡಳಿತಾತ್ಮಕ ವಿಷಯ, ಇದಕ್ಕೆ ಈ ಹೊತ್ತಿನಲ್ಲಿ ಕರೆ ಮಾಡುವ ಅವಶ್ಯಕತೆ ಇಲ್ಲ ಎಂದಿದ್ದ ಮುನೀಶ್ ಮೌದ್ಗಿಲ್ ಈ ವೇಳೆ ಏರು ಧ್ವನಿಯಲ್ಲಿ ಮಾತನಾಡಿದ್ದ.

ಮರು ದಿನ ಟ್ರೂ ಕಾಲರ್‌ನಲ್ಲಿ ಪೋನ್ ನಂಬರ್ ಪರಿಶೀಲನೆ ನಡೆಸಿದ ಐಎಎಸ್‌ ಅಧಿಕಾರಿ ಮುನೀಶ್ ಮೌದ್ಗಿಲ್ ರಾತ್ರಿ ಹೇಳಿದ್ದ ಹೆಸರು ಮತ್ತೆ ಟ್ರೂ ಕಾಲರ್ ಹೆಸರು ಬೇರೆ ಬೇರೆ ತೋರಿಸಿದೆ. ಟ್ರೂ ಕಾಲರ್ ನಲ್ಲಿ ಗೋವಿಂದರಾಜು ಟಿ ಎಂದು ಹೆಸರು ಪತ್ತೆಯಾಗಿದೆ.

ಬಳಿಕ ಅಬಕಾರಿ ಸಚಿವರ ಪಿಎ ರಾಮೇಗೌಡ ಅವರಿಗೆ ವಿಷಯ ತಿಳಿಸಿದ ಮುನೀಶ್ ಮೌದ್ಗಿಲ್ ಅವರಿಂದ ಮಾಹಿತಿಯನ್ನು ಪಡೆದಿದ್ದಾರೆ. ರಾಮೇಗೌಡ ಈ ವೇಳೆ ಸಚಿವರ ಪಿಎ ಎಂದು ಯಾರೋ ಕರೆ ಮಾಡಿದ್ದಾರೆ ಆ ವ್ಯಕ್ತಿ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ತನಗೆ ತಡರಾತ್ರಿ ಕರೆಯನ್ನು ಮಾಡಿ ಬೆದರಿಕೆಯನ್ನು ಹಾಕಿದ್ದು ಗೋಪಾಲಯ್ಯರವರ ಪಿಎ ಅಲ್ಲ ಅನ್ನೋದು ತಿಳಿಯುತ್ತಿದ್ದಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮುನೀಶ್ ಮೌದ್ಗಿಲ್ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಬಳಿಕ ಸಂಪಿಗೆ ಹಳ್ಳಿ ಪೊಲೀಸರು ಆರೋಪಿ ಗೋವಿಂದರಾಜುನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT