ವೆಂಕಯ್ಯ ನಾಯ್ಡು 
ರಾಜ್ಯ

ಜಾತ್ಯಾತೀತತೆ ಎಂಬುದು ದೇಶದ ಪ್ರತಿಯೊಬ್ಬರಲ್ಲಿ ರಕ್ತಗತವಾಗಿಯೇ ಬಂದಿದೆ: ವೆಂಕಯ್ಯ ನಾಯ್ಡು

ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ.

ಬೆಂಗಳೂರು: ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ. ಇದು ಯಾವುದೇ ಸರ್ಕಾರ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂಸ್ಥೆಯ ವಜ್ರ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಭಾರತವು ಯಾವುದೇ ದೇಶಗಳ ಮೇಲೆ ದಾಳಿ ನಡೆಸದೆ ಸಹಿಷ್ಣುತಾ ಮನೋಭಾವದಿಂದ ಇರುವುದು ದೇಶದ ಹಿರಿಮೆ ಮತ್ತು ಶ್ರೀಮಂತಿಕೆಯಾಗಿದೆ. ಇದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ತೋರಿಸುತ್ತದೆ ಎಂದು ಹೇಳಿದರು.

ದೇಶದಲ್ಲಿ ಧರ್ಮ ಪ್ರತಿಯೊಬ್ಬರ ವೈಯಕ್ತಿಕ ವಿಚಾರವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ. ಯಾರೊಬ್ಬರು ತಮ್ಮ ಧರ್ಮದ ಬಗ್ಗೆ ಹೆಮ್ಮೆ ಪಡಬಹುದು ಮತ್ತು ಆಚರಣೆ ಮಾಡಬಹುದು. ಆದರೆ, ಇತರರ ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡುವ ಹಕ್ಕು ಯಾರಿಗೂ ಇಲ್ಲ. ಕೆಲವು ಘಟನೆಗಳು ದೇಶದ ಬಹುತ್ವ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳ ಬದ್ಧತೆಯನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.

ನಾವು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಅವರು ಹೇಳಿದರು ಮತ್ತು ಪ್ರತಿಯೊಬ್ಬರೂ ತಮ್ಮ ದೇಶ, ಭಾಷೆ ಮತ್ತು ಧರ್ಮದ ಬಗ್ಗೆ ಹೆಮ್ಮೆ ಪಡಬೇಕು.  "ಪಾಶ್ಚಿಮಾತ್ಯ ಮಾಧ್ಯಮಗಳು ಭಾರತದ ಸಾಧನೆಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ನಕಾರಾತ್ಮಕ ಕಥೆಗಳನ್ನು ಹೇಳುವ ಅಭ್ಯಾಸವನ್ನು ಹೊಂದಿವೆ" ಎಂದು ಅವರು ಹೇಳಿದರು, ದೇಶದಲ್ಲಿ ಬಡತನ, ಲಿಂಗ ಅಸಮಾನತೆ ಮತ್ತು ಸಾಮಾಜಿಕ ಅಸಮಾನತೆಯಂತಹ ಹಲವಾರು ಸಮಸ್ಯೆಗಳಿವೆ ಎಂದು ವೆಂಕಯ್ಯನಾಯ್ಡು ಒಪ್ಪಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT