ರಾಜ್ಯ

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

Vishwanath S

ಕಲಬುರಗಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 

ದುಷ್ಕರ್ಮಿಗಳು ಶಹಾಬಾದ್ ನ ಸ್ಟೇಷನ್ ಏರಿಯಾದಲ್ಲಿ 40 ವರ್ಷದ ಗಿರೀಶ್ ಕಂಬಾನೂರ್ ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. 

ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಸ್ತುತ ಮೃತ ಗಿರೀಶ್ ಅವರ ಪತ್ನಿ ಶಹಾಬಾದ್ ನಗರಸಭೆಯ ಅಧ್ಯಕ್ಷರಾಗಿದ್ದಾರೆ. ಇನ್ನು 2 ವರ್ಷದ ಹಿಂದೆ ಗಿರೀಶ್ ಸಹೋದರನ ಹತ್ಯೆಯಾಗಿತ್ತು. 

SCROLL FOR NEXT