ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಮಳೆ ಹಾನಿ ನಷ್ಟದ ಮಾಹಿತಿ ಇಂದು ಸಂಜೆಯೊಳಗೆ ಬಿಡುಗಡೆ; ಕೊಡಗು ಜಿಲ್ಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರವಾಸ

ರಾಜ್ಯದಲ್ಲಿ ಮಳೆ ಹಾನಿಯಿಂದ ಇಲ್ಲಿಯವರೆಗೆ ಉಂಟಾಗಿರುವ ನಷ್ಟದ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು, ನಷ್ಟದ ಪ್ರಮಾಣ ಎಷ್ಟಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನು ಇಂದು ಸಂಜೆ ಮಾಧ್ಯಮಗಳ ಮೂಲಕ ಜನತೆಗೆ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೈಸೂರು: ರಾಜ್ಯದಲ್ಲಿ ಮಳೆ ಹಾನಿಯಿಂದ ಇಲ್ಲಿಯವರೆಗೆ ಉಂಟಾಗಿರುವ ನಷ್ಟದ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು, ನಷ್ಟದ ಪ್ರಮಾಣ ಎಷ್ಟಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನು ಇಂದು ಸಂಜೆ ಮಾಧ್ಯಮಗಳ ಮೂಲಕ ಜನತೆಗೆ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಳೆ ಅನಾಹುತ ಹೆಚ್ಚಾಗಿರುವ ಜಿಲ್ಲೆಗಳಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೊಡಗು ಜಿಲ್ಲೆಗೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಕಂದಾಯ ಸಚಿವ ಆರ್ ಅಶೋಕ್ ಹಾಗೂ ಇನ್ನಿತರ ಕೆಲವು ಸಚಿವರು, ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ತೆರಳಿದ್ದಾರೆ. 

ಈ ಸಂದರ್ಭದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪ ನಿಧಿಯಡಿಯಲ್ಲಿ 739 ಕೋಟಿ ರೂಪಾಯಿ ಪರಿಹಾರ ಧನ ಸರ್ಕಾರದ ಖಜಾನೆಯಲ್ಲಿದ್ದು ಸದ್ಯಕ್ಕೆ ಹಣದ ಕೊರತೆಯಿಲ್ಲ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕನ್ನಡ ಭಾಗಗಳಲ್ಲಿ ಭಾರೀ ಮಳೆಗೆ ಜೀವಹಾನಿಯಾಗಿದೆ. ಮನೆಗಳು ಹಾನಿಗೀಡಾಗಿವೆ. ಕೊಡಗು, ಉತ್ತರ ಕನ್ನಡಗಳಲ್ಲಿ ಭೂಕುಸಿತ ಉಂಟಾಗಿದೆ. ಅತಿ ಹೆಚ್ಚು ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಉತ್ತರ ಕನ್ನಡದಲ್ಲಿ ಅನೇಕ ಮನೆಗಳು ಕುಸಿದಿವೆ. ಒಟ್ಟಾರೆ ರಾಜ್ಯದಲ್ಲಿ ಸಂಭವಿಸಿರುವ ಅನಾಹುತಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದು ಸಂಪೂರ್ಣ ಚಿತ್ರಣ ಇಂದು ಸಾಯಂಕಾಲದೊಳಗೆ ತಿಳಿದುಬರಲಿದೆ ಎಂದರು.

ನದಿ ದಡದಲ್ಲಿರುವ ಮನೆಗಳು ಮತ್ತು ಊರುಗಳು ಮುಳುಗಡೆಯಾಗುವ ಭೀತಿ ಎದುರಿಸುತ್ತಿದ್ದರೆ ಅಲ್ಲಿನ ಜನರನ್ನು ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲು ಸರ್ಕಾರ ತಜ್ಞರ ಸಲಹೆ ಕೇಳಿದ್ದು ಅವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಪಕ್ಷದವರು ಸುಳ್ಳು ಹೇಳುತ್ತಿದ್ದಾರೆ: ಪ್ರವಾಹಪೀಡಿತ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿಲ್ಲ ಎಂಬುದು ಸುಳ್ಳು. ನಮ್ಮ ಸಚಿವರು ಕಾರ್ಯಪ್ರವೃತ್ತರಾಗಿದ್ದಾರೆ. ಉಡುಪಿಯಲ್ಲಿ ಸಚಿವರಾದ ಅಂಗಾರ, ಮಂಗಳೂರಿನಲ್ಲಿ ಸುನಿಲ್ ಕುಮಾರ್, ಉತ್ತರ ಕನ್ನಡದಲ್ಲಿ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಂದಾಯ ಸಚಿವ ಆರ್ ಅಶೋಕ್ ಉಡುಪಿಗೆ ಭೇಟಿ ನೀಡಿದ್ದಾರೆ. ನಿನ್ನೆ ಶಿರಾಡಿ ಘಾಟ್ ಗೆ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಭೇಟಿ ನೀಡಿದ್ದಾರೆ. ಸಚಿವರುಗಳು ನಿರಂತರವಾಗಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.

ನಾನು ಕೂಡ ಪ್ರವಾಹ ಪೀಡಿತ, ಹಾನಿಗೊಳಗಾಗಿರುವ ಜಿಲ್ಲೆಗಳ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಕಷ್ಟ ಆಲಿಸುತ್ತೇನೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡುತ್ತೇನೆ. ಸರ್ಕಾರ ಜನರ ಜೊತೆಗೆ ನಿಲ್ಲುತ್ತದೆ ಎಂದರು.

ನಿಗಮ ಮಂಡಳಿಗಳಿಗೆ ನೇಮಕ, ಯಾರಿಂದಲೂ ರಾಜೀನಾಮೆ ಕೇಳಿಲ್ಲ: ನಿಗಮ-ಮಂಡಳಿಗಳಲ್ಲಿ ಒಂದೂವರೆ ವರ್ಷ ಅಧಿಕಾರ ಪೂರೈಸಿದವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂದರು. ಇನ್ನು ಯಾವ ಸಚಿವರಿಂದಲೂ ರಾಜೀನಾಮೆ ಕೇಳಿಲ್ಲ. ಬಿಜೆಪಿ ಕೋರ್ ಕಮಿಟಿ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT