ತ್ರಿವರ್ಣ ಧ್ವಜ ಬಣ್ಣದೊಂದಿಗೆ ಕೆಆರ್ ಎಸ್ ಜಲಾಶಯದ ನೀರು 
ರಾಜ್ಯ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವುದು ದೀರ್ಘಾವಧಿ ಬೆಳೆಗೆ ಒಳ್ಳೆಯದು: ತಜ್ಞರ ಅಭಿಪ್ರಾಯ

ರಾಜ್ಯದ ಅನೇಕ ಕಡೆಗಳಲ್ಲಿ ವರುಣನ ಆರ್ಭಟ ಹಾಗೂ ಪ್ರವಾಹದಿಂದಾಗಿ ಸಾಕಷ್ಟು ಅನಾಹುತವಾಗಿದೆ. ಆದರೆ, ಈ ಬಾರಿಯ ಧಾರಾಕಾರ ಮಳೆ ರಾಜ್ಯದ ಕೆಲವೆಡೆ ದೀರ್ಘಾವಧಿಯ ಬೆಳೆಗೆ ಅನುಕೂಲಕರವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ರಾಜ್ಯದ ಅನೇಕ ಕಡೆಗಳಲ್ಲಿ ವರುಣನ ಆರ್ಭಟ ಹಾಗೂ ಪ್ರವಾಹದಿಂದಾಗಿ ಸಾಕಷ್ಟು ಅನಾಹುತವಾಗಿದೆ. ಆದರೆ, ಈ ಬಾರಿಯ ಧಾರಾಕಾರ ಮಳೆ ರಾಜ್ಯದ ಕೆಲವೆಡೆ ದೀರ್ಘಾವಧಿಯ ಬೆಳೆಗೆ ಅನುಕೂಲಕರವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ ಜುಲೈ 1 ರವರೆಗೆ ರಾಜ್ಯದಲ್ಲಿ 184 ಮಿಲಿ ಮೀಟರ್ ಮಳೆಯಾಗಿದೆ. 92 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅಧಿಕ ಮಳೆ ದಾಖಲಾಗಿದೆ.

ರಾಜ್ಯದಲ್ಲಿ ಪ್ರತಿ ವರ್ಷ ಜುಲೈ ಮೂರನೇ ವಾರದಲ್ಲಿ ಅಧಿಕ ಮಳೆ ದಾಖಲಾಗುತಿತ್ತು. ಆದರೆ, ಈ ವರ್ಷ ಎರಡು ವರ್ಷ ಮುಂಚಿತವಾಗಿ ಅಧಿಕ ಮಳೆಯಾಗುತ್ತಿದೆ. ಇದು ರೈತರು ಧೀರ್ಘಾವಧಿ ಬೆಳೆ ಬೆಳೆಯಲು ಅನುಕೂಲವಾಗಲಿದೆ ಎಂದು ಕೃಷಿ ತಜ್ಞ ಹಾಗೂ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್ ಪ್ರೊಫೆಸರ್ ಎಂಜಿ ರಾಜೇಗೌಡ ಹೇಳಿದ್ದಾರೆ.

ಸ್ಥಳೀಯ ವಿಶ್ವವಿದ್ಯಾನಿಲಯದ ತಜ್ಞರ ನೆರವಿನೊಂದಿಗೆ ರೈತರು ಮಣ್ಣಿನ ವೈವಿಧ್ಯತೆಗೆ ಅನುಗುಣವಾಗಿ  ಹಲಸಂದಿ, ರಾಗಿ, ಜೋಳ, ಮೆಕ್ಕೆಜೋಳ ಮತ್ತು ಕಡಲೆಕಾಯಿ ಬೆಳೆಯಬಹುದು ಮತ್ತು ಜುಲೈ ಅಂತ್ಯದವರೆಗೆ ಬಿತ್ತನೆ ಮಾಡಬಹುದು ಎಂದು ಗೌಡ ವಿವರಿಸಿದರು. 

ರೈತರು  90 ಅಥವಾ ಮೂರು ತಿಂಗಳ ಬದಲಿಗೆ ನಾಲ್ಕು ತಿಂಗಳು ಅಥವಾ 135 ದಿನದ ಬೆಳೆಗೆ ಹೋಗಬಹುದು. ದೀರ್ಘಾವಧಿಯ ಈ ಬೆಳೆಗಳಿಗೆ ಹೆಚ್ಚಿನ ಇಳುವರಿ, ಗುಣಮಟ್ಟವೂ ಉತ್ತಮವಾಗಿರುತ್ತದೆ ಮತ್ತು ರೈತರು ಉತ್ತಮ ಬೆಲೆಯನ್ನೂ ನಿರೀಕ್ಷಿಸಬಹುದು ಎಂದು ಅವರು ಹೇಳಿದರು.

ಬೇಸಿಗೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಚಾಮರಾಜನಗರ, ಮೈಸೂರು, ಕಲಬುರ್ಗಿ, ಬೀದರ್ ಮತ್ತಿತರ ಕಡೆ ರೈತರು ಅಲ್ಪಾವಧಿ ಬೆಳೆ ಆಯ್ಕೆ ಮಾಡಿಕೊಂಡಿದ್ದಾರೆ. ಹಲವೆಡೆ ರೈತರು ಅಲ್ಪಾವಧಿ ಬೆಳೆಗಳಾದ ಗೋವಿನ ಜೋಳ, ಹಸಿಬೇಳೆಯಂತ ಬೆಳೆಯನ್ನು ಏಪ್ರಿಲ್ ನಲ್ಲಿ ಬಿತ್ತನೆ ಮಾಡಿದ್ದಾರೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.  ಕೆಲವೆಡೆ ರೈತರಿಗೆ ಈ ವರ್ಷ ಎರಡನೇ ಬೆಳೆ ತೆಗೆಯುವಂತೆ ಸಲಹೆ ನೀಡಲಾಗಿದ್ದು, ಇದು ದೀರ್ಘಾವಧಿ ಬೆಳೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷದ ಜೂನ್‌ನಲ್ಲಿ, ರಾಜ್ಯವು ವಿಶೇಷವಾಗಿ ಮಲೆನಾಡು ಪ್ರದೇಶದಲ್ಲಿ ಮಳೆಯ ಕೊರತೆಯನ್ನು ಕಂಡಿತು. ಇದೇ ರೀತಿ ಮುಂದುವರಿದಿದ್ದರೆ ರೈತರಿಗೆ ತೊಂದರೆಯಾಗಲಿತ್ತು. ಆದರೆ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು ಅದೃಷ್ಟವಶಾತ್ ಕೊರತೆಯನ್ನು ಸರಿದೂಗಿಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT