ಲಾಲ್ ಬಾಗ್ ಹೂವಿನ ಪ್ರದರ್ಶನದ ಸಾಂದರ್ಭಿಕ ಚಿತ್ರ 
ರಾಜ್ಯ

ನಟ ದಿವಂಗತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ; ಆಗಸ್ಟ್ 5ರಿಂದ ಆರಂಭ

ಬೆಂಗಳೂರಿನ ಪ್ರಖ್ಯಾತ ಲಾಲ್‍ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನ ಪ್ರಖ್ಯಾತ ಲಾಲ್‍ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Independence day flower  show) ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.

ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಪುಷ್ಪ ಪ್ರದರ್ಶನ ಡೆಯಲಿದೆ. ಆಗಸ್ಟ್ 15ರ ಬಳಿಕ ಒಂದೆರಡು ದಿನಗಳ ಕಾಲ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿಯ ಪುಷ್ಪ ಪ್ರದರ್ಶನಕ್ಕೆ ನಟ ದಿ.ಪುನೀತ್ ರಾಜ್ ಕುಮಾರ್ (Puneet Rajkumar) ಹೆಸರಿನ್ನಿಡಲಾಗುತ್ತಿದೆ. ಪುನೀತ್  ಹೆಸರಿನಲ್ಲಿ ನಡೆಯುತ್ತಿರುವ ಈ ಬಾರಿಯ ಫ್ಲವರ್ ಶೋಗೆ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದರು. 

ಪ್ರದರ್ಶನದ ವಿಶೇಷ: ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷವಾಗಿದೆ. ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆಯಲ್ಲಿ ಆಗಿರುವ ನಷ್ಟದ ಬಗ್ಗೆ ಮಾತನಾಡಿದ ಸಚಿವರು, ಸಂಪೂರ್ಣ ವರದಿ ಅಧಿಕಾರಿಗಳು ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಮಾಡುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜತೆಗೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT