ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಯಿಂದ ಸಮಸ್ಯೆಗಳ ಕುರಿತು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜನಪ್ರತಿನಿಧಿ ಮತ್ತು ಅಧಿಕಾರಿಗಳ ಸಭೆ ನಡೆಸಿದರು 
ರಾಜ್ಯ

ಮಳೆ ಹಾನಿ: ಮೂಲಸೌಕರ್ಯ ಪರಿಹಾರ ಕಾರ್ಯಗಳಿಗೆ 500 ಕೋಟಿ ರೂ. ಬಿಡುಗಡೆ- ಮುಖ್ಯಮಂತ್ರಿ ಬೊಮ್ಮಾಯಿ

ಜುಲೈ ತಿಂಗಳಲ್ಲಿ ಕರಾವಳಿ, ಮಲೆನಾಡು, ಕೊಡಗು, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜೀವಹಾನಿ, ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈ ನಿಟ್ಟಿನಲ್ಲಿ ಪರಿಹಾರ, ಪುನರ್ವಸತಿ ಕಾರ್ಯಗಳಿಗೆ 500 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. 

ಉಡುಪಿ: ಜುಲೈ ತಿಂಗಳಲ್ಲಿ ಕರಾವಳಿ, ಮಲೆನಾಡು, ಕೊಡಗು, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜೀವಹಾನಿ, ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈ ನಿಟ್ಟಿನಲ್ಲಿ ಪರಿಹಾರ, ಪುನರ್ವಸತಿ ಕಾರ್ಯಗಳಿಗೆ 500 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. 

ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಇಂದು ಉಡುಪಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಹಾನಿಯಾಗಿರುವ ರಸ್ತೆಗಳ ದುರಸ್ತಿ, ಸಣ್ಣ ಸೇತುವೆಗಳ ನಿರ್ಮಾಣ ಸರ್ಕಾರದ ಆದ್ಯತೆಯ ಕೆಲಸಗಳಾಗಿವೆ. ರಾಜ್ಯದಲ್ಲಿ ರಸ್ತೆಗಳ ನಿರ್ಮಾಣ, ಸಣ್ಣ ಸೇತುವೆಗಳು, ವಿದ್ಯುತ್ ಕಂಬಗಳ ಮರುಸ್ಥಾಪನೆಗಳನ್ನು ಆದ್ಯತೆಯ ಕೆಲಸವಾಗಿ ಸರ್ಕಾರ ತೆಗೆದುಕೊಳ್ಳಲಿದ್ದು ಈ ಮೂಲಸೌಕರ್ಯಗಳಿಗೆ 500 ಕೋಟಿ ರೂಪಾಯಿ ಹಣವನ್ನು ಬಳಸಿಕೊಳ್ಳಲಾಗುವುದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಜಿಲ್ಲಾ ಮಟ್ಟದಿಂದ ಮಳೆ ಸಂಬಂಧಿ ಅನಾಹುತಗಳ ಅಂಕಿಅಂಶಗಳನ್ನು ಸಂಗ್ರಹಿಸಿದ ನಂತರ ಅಗತ್ಯಬಿದ್ದರೆ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF)ಯಿಂದ ಹೆಚ್ಚುವರಿ ಹಣವನ್ನು ಕೇಳಲಾಗುವುದು ಎಂದರು.

ಮಳೆ ಅಧಿಕವಾಗಿರುವಾಗ ಕರಾವಳಿ ಭಾಗದಲ್ಲಿ ಕಡಲ್ಕೊರೆತ ಸಮಸ್ಯೆಗೆ ಸಮುದ್ರ ಅಲೆ ತಡೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪ್ರಾಯೋಗಿಕ ಮಾದರಿಯಲ್ಲಿ ನಿರ್ಮಿಸಲಾಗುವುದು. ಈ ಮಾದರಿ ಸಮುದ್ರ ಕೊರೆತ ತಡೆಯುವಲ್ಲಿ ಯಶಸ್ವಿಯಾದರೆ ಎಲ್ಲೆಲ್ಲಿ ಸಮುದ್ರ ಕೊರೆತ ಸಮಸ್ಯೆಯಿದೆಯೋ ಅಲ್ಲಿಗೆ ವಿಸ್ತರಿಸಲಾಗುವುದು ಎಂದು ಕೂಡ ತಿಳಿಸಿದರು.

ಸಮುದ್ರ ಕಿನಾರೆ ಕೊರೆತ ತಡೆಯಲು ತಾತ್ಕಾಲಿಕ ಕ್ರಮಗಳನ್ನು ಸಹ ಅನುಸರಿಸಲಾಗುವುದು ಎಂದು ಕೂಡ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ