ವಿಧಾನಸೌಧ ತಲುಪಿದ ಮತದಾನ ಸಾಮಗ್ರಿಗಳು 
ರಾಜ್ಯ

18ರಂದು ರಾಷ್ಟ್ರಪತಿ ಚುನಾವಣೆ: ವಿಧಾನಸೌಧಕ್ಕೆ ತಲುಪಿದ ಮತದಾನದ ಸಾಮಗ್ರಿಗಳು

ಇದೇ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದ  ಅವಶ್ಯಕ ಸಾಮಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಿಂದ  ಬೆಂಗಳೂರಿನ ವಿಧಾನಸೌಧಕ್ಕೆ ತಲುಪಿದ್ದು, ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. 

ಬೆಂಗಳೂರು: ಇದೇ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ (Presidential election) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದ  ಅವಶ್ಯಕ ಸಾಮಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಿಂದ  ಬೆಂಗಳೂರಿನ ವಿಧಾನಸೌಧಕ್ಕೆ ತಲುಪಿದ್ದು, ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. 

ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ದೆಹಲಿಯಿಂದ ರಾಜ್ಯಕ್ಕೆ ಈ ಸಾಮಾಗ್ರಿಗಳನ್ನು ತರುವ ನೇತೃತ್ವ ವಹಿಸಿದ್ದರು. ನಿನ್ನೆ ಸಂಜೆ ದೆಹಲಿಯಿಂದ ರಾತ್ರಿ 8.15ಕ್ಕೆ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿ ಮತದಾನ ಸಾಮಗ್ರಿಗಳು ರಾತ್ರಿ 9 ಗಂಟೆಗೆ ವಿಧಾನಸೌಧ ತಲುಪಿವೆ. 

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಸಹಾಯಕ  ಚುನಾವಣಾಧಿಕಾರಿ ವಿಶಾಲಾಕ್ಷಿ ಅವರ ಸಮ್ಮುಖದಲ್ಲಿ ಇದಕ್ಕಾಗಿ ಮೀಸಲಿಟ್ಟಿರುವ ಕೊಠಡಿ ಸಂಖ್ಯೆ 108ರಲ್ಲಿ ಇಡಲಾಯಿತು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಹಾಯಕ ಚುನಾವಣಾಧಿಕಾರಿ, ರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯದ ಒಟ್ಟು 224 ಶಾಸಕರು ಹಾಗೂ ಸಂಸತ್ ಸದಸ್ಯರು ಮತ ಚಲಾಯಿಸಲಿದ್ದಾರೆ. ಉಳಿದ ರಾಜ್ಯದ ಸಂಸದರು ಸಂಸತ್‌ನಲ್ಲಿ ಮತ ಚಲಾಯಿಸಲಿದ್ದಾರೆ. ಒಬ್ಬರು ಅನಾರೋಗ್ಯದ ಕಾರಣಕ್ಕಾಗಿ ಇಲ್ಲಿಯೇ ಮತ ಚಲಾಯಿಸಲು ಮನವಿ ಮಾಡಿಕೊಂಡಿರುವ ಕಾರಣಕ್ಕಾಗಿ ಚುನಾವಣಾ ಆಯೋಗ ಅನುಮತಿ ನೀಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT