ಅಯೂಬ್ ಖಾನ್ 
ರಾಜ್ಯ

ಬೆಂಗಳೂರು: ಚಾಕು ಇರಿತಕ್ಕೊಳಗಾಗಿದ್ದ ಮಾಜಿ ಕಾರ್ಪೊರೇಟರ್​ ಪತಿ ಆಯೂಬ್ ಖಾನ್ ನಿಧನ

ನಿನ್ನೆ ಚಾಕು ಇರಿತಕ್ಕೆ ಒಳಗಾಗಿದ್ದ ಮಾಜಿ ಕಾರ್ಪೊರೇಟರ್​ ಪತಿ ಅಯೂಬ್ ಖಾನ್ ಇಂದು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಅಯೂಬ್ ಖಾನ್ ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಕೊನೆಯುಸಿರೆಳೆದರು.

ಬೆಂಗಳೂರು: ನಿನ್ನೆ ಚಾಕು ಇರಿತಕ್ಕೆ ಒಳಗಾಗಿದ್ದ ಮಾಜಿ ಕಾರ್ಪೊರೇಟರ್​ ಪತಿ ಅಯೂಬ್ ಖಾನ್ ಇಂದು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಅಯೂಬ್ ಖಾನ್ ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಕೊನೆಯುಸಿರೆಳೆದರು.

ಟಿಪ್ಪುನಗರದ ಮಾಜಿ ಕಾರ್ಪೊರೇಟರ್ ಆಯೂಬ್ ಖಾನ್‌ ಅವರನ್ನು ಚಾಕುವಿನಿಂದ ಇರಿದು ಹತ್ಯೆಯನ್ನು ಮಾಡಲಾಗಿದೆ. ಆಸ್ತಿ ಮತ್ತು ಮಸೀದಿ ಪ್ರೆಸಿಡೆಂಟ್ ಸ್ಥಾನ ಸಂಬಂಧಿಸಿದ ಕಲಹದಿಂದಾಗಿ ಉಂಟಾಗಿದ್ದ ಕಲಹದಲ್ಲಿ ಆಯುಬ್ ಖಾನ್‌ಗೆ ನಿನ್ನೆ (ಜುಲೈ13) ರಾತ್ರಿ ಚಾಕುವಿನಿಂದ ಇರಿಯಲಾಗಿತ್ತು. ಆಯೂಬ್ ಖಾನ್‌ನನ್ನು ತಕ್ಷಣವೇ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಅಸುನೀಗಿದ್ದಾರೆ.

ಅಯೂಬ್ ಖಾನ್ ಸಾವನ್ನಪ್ಪಿರುವ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆ ಬಳಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೂರುಕೆಎಸ್ ಆರ್ ಪಿ ತುಕಡಿ ಹಾಗೂ ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಆಸ್ತಿ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಈ ಕೊಲೆ ನಡೆದಿದೆ ಎಂದು ಆಯೂಬ್ ಖಾನ್​​ ಬೆಂಬಲಿಗರು ಆರೋಪಿಸುತ್ತಿದ್ದಾರೆ. ಚಿಕ್ಕಪ್ಪನ ಮೇಲೆ ಅಣ್ಣನ ಮಗ ಮಥೀನ್​ ಖಾನ್​​ ದಾಳಿ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರೋ ಚಾಮರಾಜಪೇಟೆ ಪೊಲೀಸರು ಪ್ರಮುಖ ಆರೋಪಿ ಮಥೀನ್ ಖಾನ್ ಹಾಗೂ ಇತರೆ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT