ಅಯೂಬ್ ಖಾನ್ 
ರಾಜ್ಯ

ಬೆಂಗಳೂರು: ಚಾಕು ಇರಿತಕ್ಕೊಳಗಾಗಿದ್ದ ಮಾಜಿ ಕಾರ್ಪೊರೇಟರ್​ ಪತಿ ಆಯೂಬ್ ಖಾನ್ ನಿಧನ

ನಿನ್ನೆ ಚಾಕು ಇರಿತಕ್ಕೆ ಒಳಗಾಗಿದ್ದ ಮಾಜಿ ಕಾರ್ಪೊರೇಟರ್​ ಪತಿ ಅಯೂಬ್ ಖಾನ್ ಇಂದು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಅಯೂಬ್ ಖಾನ್ ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಕೊನೆಯುಸಿರೆಳೆದರು.

ಬೆಂಗಳೂರು: ನಿನ್ನೆ ಚಾಕು ಇರಿತಕ್ಕೆ ಒಳಗಾಗಿದ್ದ ಮಾಜಿ ಕಾರ್ಪೊರೇಟರ್​ ಪತಿ ಅಯೂಬ್ ಖಾನ್ ಇಂದು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಅಯೂಬ್ ಖಾನ್ ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಕೊನೆಯುಸಿರೆಳೆದರು.

ಟಿಪ್ಪುನಗರದ ಮಾಜಿ ಕಾರ್ಪೊರೇಟರ್ ಆಯೂಬ್ ಖಾನ್‌ ಅವರನ್ನು ಚಾಕುವಿನಿಂದ ಇರಿದು ಹತ್ಯೆಯನ್ನು ಮಾಡಲಾಗಿದೆ. ಆಸ್ತಿ ಮತ್ತು ಮಸೀದಿ ಪ್ರೆಸಿಡೆಂಟ್ ಸ್ಥಾನ ಸಂಬಂಧಿಸಿದ ಕಲಹದಿಂದಾಗಿ ಉಂಟಾಗಿದ್ದ ಕಲಹದಲ್ಲಿ ಆಯುಬ್ ಖಾನ್‌ಗೆ ನಿನ್ನೆ (ಜುಲೈ13) ರಾತ್ರಿ ಚಾಕುವಿನಿಂದ ಇರಿಯಲಾಗಿತ್ತು. ಆಯೂಬ್ ಖಾನ್‌ನನ್ನು ತಕ್ಷಣವೇ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಅಸುನೀಗಿದ್ದಾರೆ.

ಅಯೂಬ್ ಖಾನ್ ಸಾವನ್ನಪ್ಪಿರುವ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆ ಬಳಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೂರುಕೆಎಸ್ ಆರ್ ಪಿ ತುಕಡಿ ಹಾಗೂ ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಆಸ್ತಿ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಈ ಕೊಲೆ ನಡೆದಿದೆ ಎಂದು ಆಯೂಬ್ ಖಾನ್​​ ಬೆಂಬಲಿಗರು ಆರೋಪಿಸುತ್ತಿದ್ದಾರೆ. ಚಿಕ್ಕಪ್ಪನ ಮೇಲೆ ಅಣ್ಣನ ಮಗ ಮಥೀನ್​ ಖಾನ್​​ ದಾಳಿ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರೋ ಚಾಮರಾಜಪೇಟೆ ಪೊಲೀಸರು ಪ್ರಮುಖ ಆರೋಪಿ ಮಥೀನ್ ಖಾನ್ ಹಾಗೂ ಇತರೆ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT