ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 25 ಬೈಕ್‌ಗಳನ್ನು ಕದ್ದಿದ್ದ ಸೆಕ್ಯೂರಿಟಿ ಗಾರ್ಡ್ ಅಂದರ್

25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಭದ್ರತಾ ಸಿಬ್ಬಂದಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಭದ್ರತಾ ಸಿಬ್ಬಂದಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಲಗ್ಗೆರೆಯ ಕೆಂಪೇಗೌಡ ಲೇಔಟ್ ನಿವಾಸಿ ಶ್ರೀನಿವಾಸ್ (39) ಬಂಧಿತ ಆರೋಪಿ. ಬೆಳಗ್ಗೆ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು,ರಾತ್ರಿ ವೇಳೆ ಡುಪ್ಲಿಕೇಟ್ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ.

ಜೂನ್ 22 ರಂದು ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಬೈಕ್ ಕಳೆದುಕೊಂಡ ವ್ಯಕ್ತಿಯೊಬ್ಬರು ಮಹಾಲಕ್ಷ್ಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ ನಂತರ ಶ್ರೀನಿವಾಸ್ ನನ್ನು ಬಂಧಿಸಲಾಗಿದೆ. ದುಶ್ಚಟಗಳಿಗೆ ದಾಸನಾಗಿದ್ದ ಆತನಿಗೆ ಬರುತ್ತಿದ್ದ ಸಂಬಳ ಸಾಕಾಗುತ್ತಿರಲಿಲ್ಲ, ಹೀಗಾಗಿ ಕಳ್ಳತನ ಮಾಡುತ್ತಿದ್ದಾಗಿ ಹೇಳಿದ್ದಾನೆ.

ಕದ್ದ ಬೈಕ್ ಗಳನ್ನು ತಾನು ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ವ್ಯಾಪಾರಿ ಎಂದು ಹೇಳಿಕೊಂಡು ಕೋಲಾರ ಮತ್ತು ಆಂಧ್ರಪ್ರದೇಶದ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದ. ಹಣ ವಸೂಲಿ ಮಾಡಿದ ನಂತರ ವಾಹನದ ದಾಖಲೆಗಳನ್ನು ನೀಡುತ್ತಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಬಿಯರ್ ಬಾಟಲ್‌ನಿಂದ ಪತ್ನಿ ಕೊಂದು ಪತಿ ಆತ್ಮಹತ್ಯೆ!

CJPಗೆ ಬಿಗ್ ಶಾಕ್; 2 ಕೋಟಿ ಮಾನನಷ್ಟ ಮೊಕದ್ದಮೆ, ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video