ಕಾರುಗಳ ಮೇಲೆ ಬಿದ್ದ ಶೀಟ್ 
ರಾಜ್ಯ

ಮಂಗಳೂರು: ಗಾಳಿ ಮಳೆಗೆ ಹೊಟೇಲ್ ನ ಪಾರ್ಕಿಂಗ್ ಛಾವಣಿಯಿಂದ ಧರೆಗುರುಳಿದ ಶೀಟ್, ಕಾರುಗಳು ಜಖಂ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಭಾರೀ ಮಳೆ ಗಾಳಿಗೆ ಮಂಗಳೂರಿನ ಕೆ ಎಸ್ ರಾವ್ ರಸ್ತೆಯಲ್ಲಿರುವ ಗಣೇಶ್ ಮಹಲ್ ಹೊಟೇಲ್ ನ ಪಾರ್ಕಿಂಗ್ ಜಾಗದ ಮೆಟಲ್ ಶೀಟ್ ನ ಛಾವಣಿ ಕುಸಿದಿದೆ. 

ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಭಾರೀ ಮಳೆ ಗಾಳಿಗೆ ಮಂಗಳೂರಿನ ಕೆ ಎಸ್ ರಾವ್ ರಸ್ತೆಯಲ್ಲಿರುವ ಗಣೇಶ್ ಮಹಲ್ ಹೊಟೇಲ್ ನ ಪಾರ್ಕಿಂಗ್ ಜಾಗದ ಮೆಟಲ್ ಶೀಟ್ ನ ಛಾವಣಿ ಕುಸಿದಿದೆ. 

ಈ ಸಂದರ್ಭದಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಏಳಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಜಖಂ ಆಗಿವೆ. ನಿನ್ನೆ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಹೊಟೇಲ್ ಗೆ ಊಟಕ್ಕೆ ಬಂದಿದ್ದ ಗ್ರಾಹಕರ ಕಾರುಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. 

ಇನ್ನು ಮಂಗಳೂರಿನ ಸಮುದ್ರ ಕಿನಾರೆಯಲ್ಲಿ ಕಡಲು ಕೊರೆತ ಹೆಚ್ಚಾಗಿದ್ದು ಪಣಂಬೂರಿನ ಹೊರವಲಯ ಮೀನಾಕಳಿಯ ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿದಿದೆ.  ಕಡಲು ಕೊರೆತಕ್ಕೆ ಮನೆಯೊಂದರ ಭಾಗ ಕುಸಿದಿದೆ. ಇಲ್ಲಿನ ನಿವಾಸಿಗಳನ್ನು ಮೊದಲೇ ಬೇರೆಡೆಗೆ ವರ್ಗಾಯಿಸಲಾಗಿತ್ತು. 

ಮುಂದಿನ ಕೆಲ ದಿನಗಳವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT