ರಾಜ್ಯ

ಈದ್ಗಾ ಮೈದಾನಕ್ಕೆ ಚಾಮರಾಜೇಂದ್ರ ಒಡೆಯರ್ ಹೆಸರಿಡಿ: ಸಂಸದ ಪಿ.ಸಿ.ಮೋಹನ್

Nagaraja AB

ಬೆಂಗಳೂರು: ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಬಂದ್‌ನ ಎರಡು ದಿನಗಳ ನಂತರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಮೈದಾನಕ್ಕೆ ಮೈಸೂರು ಮಹಾರಾಜ ಚಾಮರಾಜೇಂದ್ರ ಒಡೆಯರ್ ಹೆಸರಿಡುವಂತೆ ಮನವಿ ಮಾಡಿದ್ದಾರೆ. 

ಮೈದಾನದಲ್ಲಿ ಸ್ವಾತಂತ್ರ ದಿನಾಚರಣೆ, ಅಂಬೇಡ್ಕರ್ ಜಯಂತಿ, ರಾಜ್ಯೋತ್ಸವ ಮತ್ತಿತರ ಸರ್ಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು. ಮೈದಾನದಲ್ಲಿ ಹಿಂದೂ ಹಬ್ಬಗಳನ್ನು ಆಚರಿಸಲು ಅನುಮತಿ ಅಗತ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು.

ಜುಲೈ 12 ರಂದು ಚಾಮರಾಜಪೇಟೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬಂದ್ ಯಶಸ್ವಿಯಾಗಿದೆ. ಈದ್ಗಾ ಮೈದಾನ ಆಟದ ಮೈದಾನವಾಗಿ ಉಳಿಯಲಿದ್ದು, ಇದು ಬಿಬಿಎಂಪಿ ಆಸ್ತಿಯಾಗಿದೆ ಎಂದರು.

ಬಿಬಿಎಂಪಿ ಅನುಮತಿ ನಿರಾಕರಿಸಿದರೆ ಅದು ದೇಶಕ್ಕೆ ಮಾಡಿದ ದೊಡ್ಡ ಅವಮಾನವಾಗುತ್ತದೆ ಎಂದರು. ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದನ್ನು ಯಾರೂ ವಿರೋಧಿಸುವುದಿಲ್ಲ ಆದರೆ ಹಿಂದೂ ಹಬ್ಬಗಳನ್ನು ಸಹ ನಡೆಸಬೇಕು ಎಂದು ಅವರು ಹೇಳಿದರು.

SCROLL FOR NEXT