ಮಳೆ ಕಳೆದುಕೊಂಡು ನಿರಾಶ್ರಿತರಾದ ದಂಪತಿ 
ರಾಜ್ಯ

ಕೊಡಗು: ಕಾಡಾನೆಗಳ ದಾಳಿಗೆ ಗುಡಿಸಲು ಧ್ವಂಸ, ಕ್ಷಣಮಾತ್ರದಲ್ಲಿ ದಂಪತಿ ಬಚಾವ್, ನಿರ್ಗತಿಕರಾದ ಆದಿವಾಸಿ ಕುಟುಂಬ

ಎಡೆಬಿಡದೆ ಸುರಿಯುತ್ತಿರುವ ಮಳೆಯ ಅವಾಂತರದ ನಡುವೆಯೂ ದಕ್ಷಿಣ ಕೊಡಗಿನ ಗ್ರಾಮಗಳಲ್ಲಿ ಮನುಷ್ಯ-ಆನೆಗಳ ನಡುವಿನ ಸಂಘರ್ಷ ನಿರಂತರವಾಗಿ ಹೆಚ್ಚುತ್ತಿದೆ. 

ಮಡಿಕೇರಿ: ಎಡೆಬಿಡದೆ ಸುರಿಯುತ್ತಿರುವ ಮಳೆಯ ಅವಾಂತರದ ನಡುವೆಯೂ ದಕ್ಷಿಣ ಕೊಡಗಿನ ಗ್ರಾಮಗಳಲ್ಲಿ ಮನುಷ್ಯ-ಆನೆಗಳ ನಡುವಿನ ಸಂಘರ್ಷ ನಿರಂತರವಾಗಿ ಹೆಚ್ಚುತ್ತಿದೆ. 

ಇದೇ ವೇಳೆ ನಿರಂತರ ಹವಾಮಾನ ವೈಪರೀತ್ಯದಿಂದಾಗಿ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗಟ್ಟಲು ಸಾಧ್ಯವಾಗುತ್ತಿಲ್ಲ. ಗುರುವಾರ ಮಧ್ಯರಾತ್ರಿ ಮೂರು ಆನೆಗಳ ಹಿಂಡು ಅಮ್ಮತ್ತಿ ಸಮೀಪದ ಚೆನ್ನಯ್ಯನಕೋಟೆ ಗ್ರಾಮದ ಚೊಟ್ಟೆಪಾರೆ ವ್ಯಾಪ್ತಿಯ ಆದಿವಾಸಿ ಬುಡಕಟ್ಟು ಕುಟುಂಬದ ಗುಡಿಸಲಿನ ಮೇಲೆ ದಾಳಿ ಮಾಡಿವೆ. ಗ್ರಾಮಸ್ಥರಾದ ಲಕ್ಷ್ಮಿ ಮತ್ತು ಶಿವ ಚೊಟ್ಟೆಪಾರೆ ಬುಡಕಟ್ಟು ಬಡಾವಣೆಯ ನಿವಾಸಿಗಳಾಗಿದ್ದು ಹಳೆಯ ಗುಡಿಸಲಿನಲ್ಲಿ ವಾಸವಾಗಿದ್ದರು. 

ಕಳೆದ ರಾತ್ರಿ ಮೂರು ಕಾಡಾನೆಗಳು ಗುಡಿಸಲಿನ ಒಂದು ಭಾಗಕ್ಕೆ ಹಾನಿ ಮಾಡಿ ಮನೆಯಲ್ಲಿ ಕೂಡಿಟ್ಟಿದ್ದ ಆಹಾರ ಪದಾರ್ಥಗಳನ್ನು ತಿಂದು ತೇಗಿದ್ದು ನಂತರ ಇಡೀ ಗುಡಿಸಲನ್ನು ಉರುಳಿಸಿ ಕಾಡಿಗೆ ಮರಳಿವೆ. ಇನ್ನು ಕಾಡಾನೆ ಹಿಂಡು ಕಂಡ ಲಕ್ಷ್ಮಿ ಮತ್ತು ಶಿವ ಸ್ಥಳದಿಂದ ತಪ್ಪಿಸಿಕೊಂಡು ನೆರೆಹೊರೆಯವರ ಗುಡಿಸಲಿನಲ್ಲಿ ಆಶ್ರಯ ಪಡೆದಿದ್ದಾರೆ.

ಮನೆ ಕಳೆದುಕೊಂಡು ಲಕ್ಷ್ಮಿ ಮತ್ತು ಶಿವ ನಿರಾಶ್ರಿತರಾಗಿದ್ದು, ಅಕ್ಕಪಕ್ಕದ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಇನ್ನು ನಿರಾಶ್ರಿತ ದಂಪತಿಗೆ ಅರಣ್ಯ ಇಲಾಖೆ ಯಾವುದೇ ಪರಿಹಾರ ಅಥವಾ ಬೆಂಬಲ ನೀಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಈ ನಡುವೆ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಅವರು ಪ್ರಕರಣದ ತನಿಖೆಗೆ ಆದೇಶಿಸಿದ್ದು ಅದೇನೇ ಇದ್ದರೂ, ದಂಪತಿಗಳು ಈಗ ನಿರಾಶ್ರಿತರಾಗಿದ್ದು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದರು.

ಮುಂಗಾರು ಹಂಗಾಮಿನ ನಡುವೆಯೇ ಗ್ರಾಮಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗುತ್ತಿದ್ದು, ಮೇವು ಅರಸಿ ಹಿಂಡು ಹಿಂಡು ಆನೆಗಳು ಗ್ರಾಮಗಳಿಗೆ ಮುತ್ತಿಗೆ ಹಾಕುತ್ತಿವೆ. ವಿರಾಜಪೇಟೆಯ ಕುಂದಾ ಬೆಟ್ಟದಲ್ಲಿ ಹೆಚ್ಚಿನ ಸಂಖ್ಯೆಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಹವಾಮಾನ ವೈಪರೀತ್ಯದಿಂದ ಆನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆಗೆ ಸಾಧ್ಯವಾಗುತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT