ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಸನ್ನಡತೆ ಆಧಾರದ ಮೇಲೆ 84 ಕೈದಿಗಳ ಬಿಡುಗಡೆ: ಗೃಹ ಸಚಿವ ಆರಗ ಜ್ಞಾನೇಂದ್ರ

75 ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ 84 ಕೈದಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: 75 ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ 84 ಕೈದಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ತಿಳಿಸಿದ್ದಾರೆ.

ಜೈಲಲ್ಲಿ ಅಕ್ರಮಗಳ ಕುರಿತು ಇಂದು ಮಾತನಾಡಿದ ಅವರು, ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮಕೈಗೊಳ್ಳಲಾಗಿದೆ. ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ ಅದನ್ನು ಸರಿಪಡಿಸುತ್ತೇವೆ. ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ಇವಾಗ ಬಹುತೇಕ ಹೊಸ ಸಿಬ್ಬಂದಿಗಳು ಇದ್ದಾರೆ. ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ, ಎಲ್ಲವನ್ನು ಹಿಡಿಯುತ್ತಿದ್ದಾರೆ ಎಂದು ತಿಳಿಸಿದರು.

ಫೋನ್, ನಿಷೇಧಿತ ವಸ್ತು ಬಳಕೆ ಮಾಡಿದರೆ ಎಫ್ ಐ ಆರ್ ಆಗುತ್ತಿದೆ. ಕೈದಿಗಳ ಶಿಕ್ಷೆ ಪ್ರಮಾಣ ಮುಗಿದ ಬಳಿಕ ಐದು ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದೆ. ಸಿಬ್ಬಂದಿಯ ವಿರುದ್ಧವೂ ಎಫ್ ಐ ಆರ್ ದಾಖಲು ಮಾಡಲಾಗುತ್ತಿದೆ. ಈ ರೀತಿ ಬಿಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪರಪ್ಪನ ಅಗ್ರಹಾರದಲ್ಲಿ 4 ಜಿ ಜಾಮರ್ ಹಾಕಲಾಗುವುದು. ಅತ್ಯಂತ ಶೀಘ್ರವಾಗಿ ಈ ಕ್ರಮ ಕೈಗೊಳ್ಳಲಾಗುವುದು. ಕೆಲವು ಸಿಬ್ಬಂದಿ ಅನಾಚಾರದಲ್ಲಿ ಕೈಜೋಡಿಸಿದ್ದರು. ಆದರೆ ಇವಾಗ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ 1 ಲಕ್ಷ ಪೊಲೀಸರ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತೆ. ಸ್ವಾತಂತ್ರ್ಯೋತ್ಸದ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ 84 ಕೈದಿಗಳ ಬಿಡುಗಡೆ ಮಾಡಲಾಗುತ್ತಿದೆ. ಪಿಎಸ್ಐ ಅಕ್ರಮದ ತ‌ನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಯಾವ ಒತ್ತಡ ಏನೂ ಇಲ್ಲ, ಗಂಭೀರವಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಿಐಡಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ ಎಂದರು.

ವಿರೋಧ ಪಕ್ಷದ ನಾಯಕರು ಹಿರಿಯ ರಾಜಕಾರಣಿಗಳು. ಅವರ ಆಡಳಿತ ಅವಧಿಯಲ್ಲಿ ಎಷ್ಟು, ಏನೇನಾಗುತ್ತಿತ್ತು ಎಂಬ ಬಗ್ಗೆ ದಾಖಲೆ ನೀಡಬಲ್ಲೆ. ಇವಾಗ ಚಾರಿತ್ರಹರಣ ಮಾಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಸಮಯ ಬಂದಾಗ ಯಾವುದೇ ಇತರ ಪ್ರಕರಣದ ತನಿಖೆ ಮಾಡುವುದು ತಪ್ಪಲ್ಲ. ನಮ್ಮ ಕಣ್ಣ ಮುಂದೆ ಇರುವುದು ಸದ್ಯ ಪಿಎಸ್ ಐ ಹಗರಣದ ತನಿಖೆ. ಮಧ್ಯವರ್ತಿ, ಹಣ ಕೊಟ್ಟವರ ವಿರುದ್ಧವೂ ಕ್ರಮ ಆಗುತ್ತಿದೆ. ಇನ್ನೊಮ್ಮೆ ಪರೀಕ್ಷೆಯಲ್ಲಿ ಇಂತಹ ಘಟನೆ ಆಗಬಾರದು. ತನಿಖೆ ಆಗುತ್ತಿದೆ, ಯಾವುದೇ ಊಹೆಯ ಮಾತು ಹೇಳಲ್ಲ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ

T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video

T20 World Cup 2026: 2ನೇ ಸೆಮಿಫೈನಲ್; ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

SCROLL FOR NEXT