ಸಾಂದರ್ಭಿಕ ಚಿತ್ರ 
ರಾಜ್ಯ

ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು

ರಸ್ತೆ ಅಪಘಾತದಲ್ಲಿ ಆಂಧ್ರ ಪ್ರದೇಶ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೈಂದೂರಿನಲ್ಲಿ ವರದಿಯಾಗಿದೆ.

ಉಡುಪಿ: ರಸ್ತೆ ಅಪಘಾತದಲ್ಲಿ ಆಂಧ್ರ ಪ್ರದೇಶ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೈಂದೂರಿನಲ್ಲಿ ವರದಿಯಾಗಿದೆ.

ಮೃತ ಯುವಕರನ್ನು ತರುಣ್ ಕುಮಾರ್ ರೆಡ್ಡಿ(19) ಹಾಗೂ ಆಶೀಶ್ ರೆಡ್ಡಿ(18) ಎಂದು ಗುರುತಿಸಲಾಗಿದ್ದು ಇಬ್ಬರೂ ವಿದ್ಯಾರ್ಥಿಗಳು ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಇಬ್ಬರೂ ಯುವಕರು ಮಣಿಪಾಲದಿಂದ ಮುರುಡೇಶ್ವರಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಬೈಂದೂರಿನ ಕಂಬದಕೊನೆಯ ಬಳಿ ಇರುವ ರಾಷ್ಟ್ರೀಯ ಹದ್ದಾರಿ 66 ರಲ್ಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದು ರಸ್ತೆ ವಿಭಜಕಕ್ಕೆ ಗುದ್ದಿದ್ದಾರೆ ಪರಿಣಾಮ ಇಬ್ಬರೂ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ಸ್ಥಳೀಯ ಜನತೆ ತಕ್ಷಣವೇ ಅಲ್ಲಿಗೆ ಬಂದು ಯುವಕರನ್ನು ಆಸ್ಪತ್ರೆಗೆ ದಾಖಳಿಸಿದರು ಆದರೆ ಆ ವೇಳೆಗೆ ಯುವಕರು ಸಾವನ್ನಪ್ಪಿದ್ದರು ಎಂದು ವೈದ್ಯರು ಘೋಷಿಸಿದ್ದಾರೆ. ಬೈಂದೂರು ಪೊಲೀಸರು ರಸ್ತೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT