ಭದ್ರಾ ಡ್ಯಾಂ ತಡೆಗೋಡೆ ಕುಸಿತ 
ರಾಜ್ಯ

ಭದ್ರಾ ಡ್ಯಾಂ ಬಳಿ ತಡೆಗೋಡೆ ಕುಸಿತ: ಸಂಚಾರ ಸ್ಥಗಿತಕ್ಕೆ ಆಗ್ರಹ

ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಸೋಮವಾರ ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಸೋಮವಾರ ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಿದ್ದು, ಕಳೆದ ಹಲವು ದಿನಗಳಿಂದ ನೀರು ಹೊರ ಬಿಡಲಾಗುತ್ತಿದೆ. ಜಲರಾಶಿ ಸೊಬಗು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಡ್ಯಾಂ ನೀರಿನ ರಭಸಕ್ಕೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ತಡೆಗೋಡೆ ಕುಸಿದು ಬಿದ್ದಿದೆ.

ದಿನದಿಂದ ದಿನಕ್ಕೆ ಭೂ ಕುಸಿತ ಹೆಚ್ಚಾಗುತ್ತಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಆದರೆ ಇಲ್ಲಿಯವರೆಗೂ ಸೂಕ್ತ ದುರಸ್ತಿ ಕಾಮಗಾರಿಯಾಗಲಿ, ಮುನ್ನೆಚ್ಚರಿಕೆ ಕ್ರಮವಾಗಲಿ ಕೈಗೊಂಡಿಲ್ಲ. ಪೊಲೀಸ್ ಇಲಾಖೆಯ ಬ್ಯಾರಿಕೇಡ್ ಕೂಡ ಕುಸಿದು ನದಿಗೆ ಬಿದ್ದಿದೆ ಎಂದು ಪ್ರವಾಸಿಗರು ದೂರಿದ್ದಾರೆ.

ಡ್ಯಾಂನಿಂದ ನೀರು ಹೊರಬಿಟ್ಟಿರುವ ಕಾರಣದಿಂದ ಭಾರೀ ಸಂಖ್ಯೆಯ ಪ್ರವಾಸಿಗರು ಡ್ಯಾಂ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ತಡೆಗೋಡೆ ಕುಸಿತವಾಗಿರುವ ಸ್ಥಳದ ಬಳಿಯೇ ಓಡಾಡುತ್ತಿದ್ದಾರೆ. ಕೊಂಚ ಹೆಚ್ಚಾ ಕಮ್ಮಿಯಾದರೂ ನಾಗರೀಕರು ನದಿಗೆ ಬೀಳುವ ಸಾಧ್ಯತೆಯಿದೆ. ತಕ್ಷಣವೇ ಭದ್ರಾ ಜಲಾಶಯ ಆಡಳಿತ ದುರಸ್ತಿ ಕಾರ್ಯ ನಡೆಸಬೇಕು. ಜೊತೆಗೆ ಸ್ಥಳದಲ್ಲಿ ಪ್ರವಾಸಿಗರ ಸಂಚಾರ ನಿರ್ಬಂಧಿಸಿ, ಸೂಕ್ತ ಬ್ಯಾರಿಕೇಡ್ ? ಮುನ್ನೆಚ್ಚರಿಕೆ ಫಲಕ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್