ಭದ್ರಾ ಡ್ಯಾಂ ತಡೆಗೋಡೆ ಕುಸಿತ 
ರಾಜ್ಯ

ಭದ್ರಾ ಡ್ಯಾಂ ಬಳಿ ತಡೆಗೋಡೆ ಕುಸಿತ: ಸಂಚಾರ ಸ್ಥಗಿತಕ್ಕೆ ಆಗ್ರಹ

ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಸೋಮವಾರ ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಸೋಮವಾರ ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಿದ್ದು, ಕಳೆದ ಹಲವು ದಿನಗಳಿಂದ ನೀರು ಹೊರ ಬಿಡಲಾಗುತ್ತಿದೆ. ಜಲರಾಶಿ ಸೊಬಗು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಡ್ಯಾಂ ನೀರಿನ ರಭಸಕ್ಕೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ತಡೆಗೋಡೆ ಕುಸಿದು ಬಿದ್ದಿದೆ.

ದಿನದಿಂದ ದಿನಕ್ಕೆ ಭೂ ಕುಸಿತ ಹೆಚ್ಚಾಗುತ್ತಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಆದರೆ ಇಲ್ಲಿಯವರೆಗೂ ಸೂಕ್ತ ದುರಸ್ತಿ ಕಾಮಗಾರಿಯಾಗಲಿ, ಮುನ್ನೆಚ್ಚರಿಕೆ ಕ್ರಮವಾಗಲಿ ಕೈಗೊಂಡಿಲ್ಲ. ಪೊಲೀಸ್ ಇಲಾಖೆಯ ಬ್ಯಾರಿಕೇಡ್ ಕೂಡ ಕುಸಿದು ನದಿಗೆ ಬಿದ್ದಿದೆ ಎಂದು ಪ್ರವಾಸಿಗರು ದೂರಿದ್ದಾರೆ.

ಡ್ಯಾಂನಿಂದ ನೀರು ಹೊರಬಿಟ್ಟಿರುವ ಕಾರಣದಿಂದ ಭಾರೀ ಸಂಖ್ಯೆಯ ಪ್ರವಾಸಿಗರು ಡ್ಯಾಂ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ತಡೆಗೋಡೆ ಕುಸಿತವಾಗಿರುವ ಸ್ಥಳದ ಬಳಿಯೇ ಓಡಾಡುತ್ತಿದ್ದಾರೆ. ಕೊಂಚ ಹೆಚ್ಚಾ ಕಮ್ಮಿಯಾದರೂ ನಾಗರೀಕರು ನದಿಗೆ ಬೀಳುವ ಸಾಧ್ಯತೆಯಿದೆ. ತಕ್ಷಣವೇ ಭದ್ರಾ ಜಲಾಶಯ ಆಡಳಿತ ದುರಸ್ತಿ ಕಾರ್ಯ ನಡೆಸಬೇಕು. ಜೊತೆಗೆ ಸ್ಥಳದಲ್ಲಿ ಪ್ರವಾಸಿಗರ ಸಂಚಾರ ನಿರ್ಬಂಧಿಸಿ, ಸೂಕ್ತ ಬ್ಯಾರಿಕೇಡ್ ? ಮುನ್ನೆಚ್ಚರಿಕೆ ಫಲಕ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT