ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.

ನಿನ್ನೆ ಸಂಜೆ ವೇಳೆ ಇ ಮೇಲ್ ಬಂದಿದ್ದು, ಇಂದು ಬೆಳಿಗ್ಗೆ ಶಾಲೆಗೆ ಬಂದಾಗ ಸಂಗತಿ ಬಯಲಾಗಿದೆ. ಆರ್‌ ಆರ್‌ ನಗರ ಠಾಣೆ ಪೊಲೀಸರು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್‌ ಬೆದರಿಕೆ ಹಿನ್ನೆಲೆ ಶಾಲೆಯಿಂದ ಮಕ್ಕಳನ್ನ ಬೇರೊಂದು ಯೂನಿಟ್ ಗೆ ಶಿಫ್ಟ್ ಮಾಡಲಾಗಿದ್ದು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ.

ನ್ಯಾಷನಲ್ ಹಿಲ್ ವ್ಯೂವ್ ಸ್ಕೂಲ್​ನ ಯೂನಿಟ್ 3ಗೆ ಮೇಲ್ ಬಂದಿದೆ. ಶಾಲಾ ಸಿಬ್ಬಂದಿ ಯೂನಿಟ್ 1, ಯೂನಿಟ್ 2ಗೆ ಒಂದೂವರೆ ಸಾವಿರ ಮಕ್ಕಳನ್ನ ಶಿಫ್ಟ್ ಮಾಡಿದ್ದಾರೆ. ಬೆದರಿಕೆ ಮೇಲ್ ಬಂದಿರುವುದು ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.  

"Huchcha venkat, hachaswamyvenkat96@gmail.com" ಐಡಿಯಿಂದ ಮೇಲ್ ಬಂದಿದೆ. ಮೇಲ್ ಸಾರಾಂಶ ಹೀಗಿದೆ: "ಶಾಲೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ, ಅದು ನಾಳೆ 10 ಗಂಟೆಗೆ ಸ್ಫೋಟಗೊಳ್ಳುತ್ತದೆ, ನಿಮ್ಮ ಕೈಲಾದಷ್ಟು ಪ್ರಯತ್ನಿಸಿ. ಅದರ ಪರಿಣಾಮವು 200 ಅಡಿ ವ್ಯಾಪ್ತಿಯವರೆಗೆ ಇರುತ್ತದೆ".

ಈ ವಿಚಾರದ ಬಳಿಕ  ಶಿಕ್ಷಕರು ಹಾಗೂ ಮಕ್ಕಳು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಆರ್.ಆರ್.ನಗರ, ಜ್ಞಾನ ಭಾರತಿ ,ಬ್ಯಾಟರಾಯನಪುರ ಸುತ್ತಮುತ್ತಲಿನ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಕೂಲ್ ಬಳಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT