ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.

ನಿನ್ನೆ ಸಂಜೆ ವೇಳೆ ಇ ಮೇಲ್ ಬಂದಿದ್ದು, ಇಂದು ಬೆಳಿಗ್ಗೆ ಶಾಲೆಗೆ ಬಂದಾಗ ಸಂಗತಿ ಬಯಲಾಗಿದೆ. ಆರ್‌ ಆರ್‌ ನಗರ ಠಾಣೆ ಪೊಲೀಸರು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್‌ ಬೆದರಿಕೆ ಹಿನ್ನೆಲೆ ಶಾಲೆಯಿಂದ ಮಕ್ಕಳನ್ನ ಬೇರೊಂದು ಯೂನಿಟ್ ಗೆ ಶಿಫ್ಟ್ ಮಾಡಲಾಗಿದ್ದು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ.

ನ್ಯಾಷನಲ್ ಹಿಲ್ ವ್ಯೂವ್ ಸ್ಕೂಲ್​ನ ಯೂನಿಟ್ 3ಗೆ ಮೇಲ್ ಬಂದಿದೆ. ಶಾಲಾ ಸಿಬ್ಬಂದಿ ಯೂನಿಟ್ 1, ಯೂನಿಟ್ 2ಗೆ ಒಂದೂವರೆ ಸಾವಿರ ಮಕ್ಕಳನ್ನ ಶಿಫ್ಟ್ ಮಾಡಿದ್ದಾರೆ. ಬೆದರಿಕೆ ಮೇಲ್ ಬಂದಿರುವುದು ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.  

"Huchcha venkat, hachaswamyvenkat96@gmail.com" ಐಡಿಯಿಂದ ಮೇಲ್ ಬಂದಿದೆ. ಮೇಲ್ ಸಾರಾಂಶ ಹೀಗಿದೆ: "ಶಾಲೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ, ಅದು ನಾಳೆ 10 ಗಂಟೆಗೆ ಸ್ಫೋಟಗೊಳ್ಳುತ್ತದೆ, ನಿಮ್ಮ ಕೈಲಾದಷ್ಟು ಪ್ರಯತ್ನಿಸಿ. ಅದರ ಪರಿಣಾಮವು 200 ಅಡಿ ವ್ಯಾಪ್ತಿಯವರೆಗೆ ಇರುತ್ತದೆ".

ಈ ವಿಚಾರದ ಬಳಿಕ  ಶಿಕ್ಷಕರು ಹಾಗೂ ಮಕ್ಕಳು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಆರ್.ಆರ್.ನಗರ, ಜ್ಞಾನ ಭಾರತಿ ,ಬ್ಯಾಟರಾಯನಪುರ ಸುತ್ತಮುತ್ತಲಿನ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಕೂಲ್ ಬಳಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT