ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ 
ರಾಜ್ಯ

ಲಂಚ ಪ್ರಕರಣ: ಮಾಧ್ಯಮಗಳ 'ವಿಚಾರಣೆ' ವಿರುದ್ಧ ಬೆಂಗಳೂರು ನಗರ ಮಾಜಿ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ಮಾಧ್ಯಮಗಳ 'ವಿಚಾರಣೆ'' ವಿರುದ್ಧ  ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಲಂಚ ಪ್ರಕರಣದಲ್ಲಿ ಆರೋಪಿಯೊಬ್ಬರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹೇಳಿಕೆ ನಂತರ ಮಾಧ್ಯಮಗಳ ವರದಿಗಳ ವಿರುದ್ಧ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಉಪ ತಹಸೀಲ್ದಾರ್ ಪಿ.ಎಸ್. ಮಹೇಶ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಂದೇಶ್, ಮಂಜುನಾಥ್ ಅವರನ್ನು ಏಕೆ ಆರೋಪಿಯನ್ನಾಗಿ ಮಾಡಿಲ್ಲ ಎಂದು ಪ್ರಶ್ನಿಸಿದ್ದರು. ಅಲ್ಲದೇ, ಭ್ರಷ್ಟಾಚಾರ ನಿಗ್ರಹ ದಳ ಕಲೆಕ್ಷನ್ ಸೆಂಟರ್ ಗಳಾಗಿವೆ ಮತ್ತು ಅದರ ಹೆಚ್ಚುವರಿ ಡಿಪಿಸಿ ಸೀಮಂತ್ ಕುಮಾರ್ ಸಿಂಗ್ ಕಳಂಕಿತ ಅಧಿಕಾರಿ ಎಂದು ಕರೆದಿದ್ದರು. 

ಮಹೇಶ್ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ನನಗೆ ವರ್ಗಾವಣೆಯ ಬೆದರಿಕೆಗಳು ಬರುತ್ತಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ತಿಳಿಸಿದ್ದರು. ನಂತರ, ಹೈಕೋರ್ಟ್ ವಿಚಾರಣೆಗೆ ತಡೆ ಕೋರಿ ಎಸಿಬಿ ಮತ್ತು ಹೆಚ್ಚುವರಿ ಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. 

ಬಂಧನಕ್ಕೊಳಗಾಗಿರುವ ಮಂಜುನಾಥ್, ನ್ಯಾಯಮೂರ್ತಿ ಪಿ. ಸಂದೇಶ್ ಅವರ ಟೀಕೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತಮಗೆ ಅವಕಾಶ ನೀಡದೆ ಅನಗತ್ಯ ಟೀಕೆ ಮಾಡಲಾಗುತ್ತಿದ್ದು, ತುರ್ತು ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್ ಗೂ ವಸ್ತು ಸ್ಥಿತಿ ಗೊತ್ತಿಲ್ಲ, ಇಂತಹ ಹೇಳಿಕೆಗಳು ನ್ಯಾಯಯುತ ತನಿಖೆ ಮೇಲೂ ಪರಿಣಾಮ ಬೀರಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ಈ ಹೇಳಿಕೆಯಿಂದಾಗಿ ಮಾಧ್ಯಮಗಳ ವರದಿಗಳನ್ನು ಮಾಜಿ ಜಿಲ್ಲಾಧಿಕಾರಿ ಪ್ರಶ್ನಿಸಿದ್ದಾರೆ. ಜುಲೈ 4 ರಂದು ಬಂಧನಕ್ಕೊಳಗಾಗಿದ್ದ ಮಂಜುನಾಥ್ ಅವರಿಗೆ ಜುಲೈ 11 ರಂದು ಜಾಮೀನು ನೀಡಲು ಸೆಷನ್ಸ್ ನ್ಯಾಯಾಲಯ ನಿರಾಕರಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT