ಕೆಎಂಎಫ್ 
ರಾಜ್ಯ

ಬೆಲೆ ಏರಿಕೆಗೆ ಸಾರ್ವಜನಿಕರಿಂದ ಆಕ್ರೋಶ: ನಂದಿನಿ ಹಾಲು ಉತ್ಪನ್ನಗಳ ಬೆಲೆ ಇಳಿಕೆ

ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್‌ಟಿ ವಿಧಿಸಿದ ಪರಿಣಾಮ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದಕ್ಕೆ ಸಾರ್ವಜನಿಕರಿಂದ ವ್ಯಕ್ತವಾದ ಭಾರೀ ವಿರೋಧಕ್ಕೆ ಕೆಎಂಎಫ್ ಮಣಿದಿದೆ. 

ಬೆಂಗಳೂರು: ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್‌ಟಿ ವಿಧಿಸಿದ ಪರಿಣಾಮ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದಕ್ಕೆ ಸಾರ್ವಜನಿಕರಿಂದ ವ್ಯಕ್ತವಾದ ಭಾರೀ ವಿರೋಧಕ್ಕೆ ಕೆಎಂಎಫ್ ಮಣಿದಿದೆ. 

ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿ, ಬೆಲೆ ಇಳಿಕೆ ಬಗ್ಗೆ ಸಿಎಂ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕೆಎಂಎಫ್ ಉತ್ಪನ್ನಗಳ ಮೇಲಿನ ಬೆಲೆ ಏರಿಕೆಯನ್ನು ಸ್ವಲ್ಪ ತಗ್ಗಿಸಿದೆ. ನಂದಿನಿ ಮೊಸರು, ಲಸ್ಸಿ, ಮಜ್ಜಿಗೆ ದರವನ್ನು 50 ಪೈಸೆಯಿಂದ 1.50 ರೂ. ವರೆಗೂ ಕಡಿಮೆ ಮಾಡಿದೆ. ಈ ಪರಿಷ್ಕೃತ ದರ ಮಂಗಳವಾರದಿಂದ ಜಾರಿಗೆ ಬರಲಿದೆ.

ಬೆಲೆ ಇಳಿಕೆ ಮಾಡಿದ ಮೇಲೆ 200 ಗ್ರಾಮ್ ಮೊಸರಿಗೆ 10.50 ರೂಪಾಯಿ ನಿಗದಿಪಡಿಸಲಾಗಿದೆ. ಇದರಿಂದ ಬೆಲೆ ಏರಿಕೆಗೂ ಹಿಂದೆ ಇದ್ದ ದರಕ್ಕಿಂತ 50 ಪೈಸೆ ಹೆಚ್ಚಿಸಲಾಗಿದೆ. ಜಿಎಸ್ ಟಿ ವಿಧಿಸಿದ್ದರ ಆಧಾರದಲ್ಲಿ ಬೆಲೆ ಏರಿಕೆ ಮಾಡಿದ್ದರೆ, 200 ಗ್ರಾಂ ಮೊಸರಿನ ದರವನ್ನು 1 ರೂ. 68 ಪೈಸೆಗೆ ಹೆಚ್ಚಿಸಬೇಕಿತ್ತು. ಕೆಎಂಎಫ್‌ ಒಟ್ಟು 2 ರೂ. ಏರಿಕೆ ಮಾಡಿತ್ತು. ಆದರೆ ಈಗ 50 ಪೈಸೆ ಮಾತ್ರ ಹೆಚ್ಚಿಸಲಾಗಿದೆ.

ಇನ್ನು 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರ ಜಿಎಸ್ ಟಿ ಅನ್ವಯದ ಪ್ರಕಾರ 7 ರೂ. ನಿಂದ 8 ರೂ.ಗಳಿಗೆ ಹೆಚ್ಚಿಸಲಾಗಿತ್ತು. ಇತ್ತೀಚಿನ ಪರಿಷ್ಕೃತ ದರದ ಅನ್ವಯ 8 ರೂಪಾಯಿಗಳ ಬದಲು 7.50 ರೂ.ಗಳಿಗೆ ನಿಗದಿಪಡಿಸಲಾಗಿದೆ. 200 ಮಿ.ಲೀ ಸ್ಯಾಚೆಯ ಲಸ್ಸಿ ದರವನ್ನು 10 ರೂ. ನಿಂದ 11 ರೂ.ಗಳಿಗೆ ಹೆಚ್ಚಿಸಲಾಗಿತ್ತು. ಈಗ ಹೊಸ ದರದ ಅನ್ವಯ 10.50 ರೂ.ಗಳಿಗೆ ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT