ಮನೇಕಾ ಗಾಂಧಿ 
ರಾಜ್ಯ

ಸಂಚಲನ ಸೃಷ್ಟಿಸಿದೆ ಸಂಸದೆ ಮನೇಕಾ ಗಾಂಧಿ ಪತ್ರ: ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ

ಆನೆ ಕೊಂದ ಆರೋಪಿಗಳು ಜೆಡಿಎಸ್ ಬೆಂಬಲಿಗರಾಗಿದ್ದು ಪ್ರಕರಣವನ್ನು ಮುಚ್ಚಿ ಹಾಕುವಂತೆ ಸ್ಥಳೀಯ ಸಂಸದ ಪ್ರಜ್ವಲ್ ರೇವಣ್ಣ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಯತ್ನಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ಬೆಂಗಳೂರು: ವಿದ್ಯುತ್ ತಂತಿ ತಗುಲಿ ಆನೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದೆ ಹಾಗೂ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.

ಇಡೀ ಪ್ರಕರಣವನ್ನು ಹಾಸನ ಅರಣ್ಯ ಇಲಾಖೆಯಿಂದ ತನಿಖೆಗಾಗಿ ವಿಜಿಲೆನ್ಸ್ ಇಲಾಖೆಗೆ ತನಿಖೆಗೆ ವರ್ಗಾಯಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಆನೆ ಕೊಂದ ಆರೋಪಿಗಳು ಜೆಡಿಎಸ್ ಬೆಂಬಲಿಗರಾಗಿದ್ದು ಪ್ರಕರಣವನ್ನು ಮುಚ್ಚಿ ಹಾಕುವಂತೆ ಸ್ಥಳೀಯ ಸಂಸದ ಪ್ರಜ್ವಲ್ ರೇವಣ್ಣ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಯತ್ನಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. ಮೇನಕಾ ಬರೆದಿರುವ ಪತ್ರದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಲಭ್ಯವಾಗಿದೆ.

2021 ರಲ್ಲಿ ಹಾಸನದ ರೈತನೊಬ್ಬ ಆನೆಗೆ ಕರೆಂಟ್ ಶಾಕ್​ ಕೊಟ್ಟು ಹತ್ಯೆ ಮಾಡಿ ದಂತ ತೆಗೆದು ಹೂತು ಹಾಕಿದ್ದರು. ಅಲ್ಲಿ ಜೆಸಿಬಿಯಿಂದ ಅಗೆದು ನೋಡಿದಾಗ 10 ಅಡಿಯಲ್ಲಿ ಆನೆಯ ದೇಹ ಪತ್ತೆಯಾಗಿತ್ತು ಎಂದು ಮನೇಕಾ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಹಾಸನ ಆರ್​ಎಫ್ಒ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ತಮ್ಮ ದೂರಿನಲ್ಲಿ ಮನೇಕಾ ಗಾಂಧಿ ಉಲ್ಲೇಖ ಮಾಡಿದ್ದಾರೆ. ಮಾತ್ರವಲ್ಲದೆ ಹಾಸನ ರೇಂಜ್ ಆಫೀಸರ್ ಬಗ್ಗೆ ಸೂಕ್ತ ತನಿಖೆ ಮಾಡಲು ಮನವಿ ಕೂಡ ಮಾಡಿದ್ದಾರೆ. 

ಪ್ರಕರಣ ದಾಖಲಿಸಿಕೊಂಡಿರುವ ಹಾಸನ ಅರಣ್ಯ ಸಿಬ್ಬಂದಿ ತಪ್ಪಿತಸ್ಥರು ಎಸ್ಕೇಪ್ ಆಗಲು ಸಹಾಯವಾಗುವಂತೆ ಬೇರೆ ಇಬ್ಬರನ್ನು ಬಂಧಿಸಿದ್ದಾರೆ, ಆರೋಪಿಯು ಎರಡು ವಿಭಿನ್ನ ಸಂಸ್ಥೆಗಳಿಂದ ಕಾಮಗಾರಿಗಳನ್ನು ನಕಲು ಮಾಡಿರುವುದಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಜಾಮೀನು ಪಡೆದಿದ್ದಾರೆ. ಆರ್‌ಎಫ್‌ಒ ಹಾಸನ ಕಾನೂನು ಪಾಲಿಸುತ್ತಿಲ್ಲ ಎಂದು ಮೇನಕಾ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT