ಉದ್ಘಾಟನೆಗೆ ಎಮ್ಮೆಯನ್ನು ಕರೆತಂದ ಗ್ರಾಮಸ್ಥರು 
ರಾಜ್ಯ

ಎಮ್ಮೆಯಿಂದ ಬಸ್ ನಿಲ್ದಾಣ ಉದ್ಘಾಟನೆ: ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆಯಲು ಗ್ರಾಮಸ್ಥರ ಉಪಾಯ!

ಗದಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಬಸ್ ನಿಲ್ದಾಣ ಉದ್ಘಾಟನೆಯ ವಿಶಿಷ್ಟ ಸಮಾರಂಭ. ಇಂತಹ ಕಾರ್ಯಕ್ರಮಗಳಿಗೆ ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳು ಬರುತ್ತಾರೆ, ಆದರೆ ಈ ಕಾರ್ಯಕ್ರಮ ಸಂಪೂರ್ಣ ಭಿನ್ನ, ಇದಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದು ಎಮ್ಮೆ.

ಗದಗ: ಗದಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಬಸ್ ನಿಲ್ದಾಣ ಉದ್ಘಾಟನೆಯ ವಿಶಿಷ್ಟ ಸಮಾರಂಭ. ಇಂತಹ ಕಾರ್ಯಕ್ರಮಗಳಿಗೆ ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳು ಬರುತ್ತಾರೆ, ಆದರೆ ಈ ಕಾರ್ಯಕ್ರಮ ಸಂಪೂರ್ಣ ಭಿನ್ನ, ಇದಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದು ಎಮ್ಮೆ. 

ಬಸ್ ನಿಲ್ದಾಣ ಉದ್ಘಾಟಿಸುವ ಸಂದರ್ಭದಲ್ಲಿ ರಿಬ್ಬನ್ ಕತ್ತರಿಸುವ ವೇಳೆ ಗ್ರಾಮಸ್ಥರೊಂದಿಗೆ ಎಮ್ಮೆ ಇದ್ದು ಎಲ್ಲರಿಂದ ಚಪ್ಪಾಳೆ ಗಿಟ್ಟಿಸಿಕೊಂಡು ನೋಡುಗರ ಗಮನಸೆಳೆಯಿತು. 

ಯಾಕೆ ಎಮ್ಮೆಯನ್ನು ಕರೆತಂದರು?: ಗದಗ ಜಿಲ್ಲೆಯ ಬಾಳೆಹೊಸೂರು ಗ್ರಾಮಸ್ಥರು ತಮಗೊಂದು ಬಸ್ ತಂಗುದಾಣ ನೀಡುವಂತೆ ಅಧಿಕಾರಿಗಳಿಗೆ ಬಹುದಿನಗಳಿಂದ ಮನವಿ ಮಾಡುತ್ತಿದ್ದರು. ಆದರೆ ಅಧಿಕಾರಿಗಳು ಕ್ಯಾರೇ ಮಾಡಿರಲಿಲ್ಲ. ಅಧಿಕಾರಿಗಳ ಗಮನ ಸೆಳೆಯಲು ಗ್ರಾಮಸ್ಥರು ಎಮ್ಮೆ ಕರೆತಂದು ಈ ರೀತಿ ವಿಶಿಷ್ಟತೆ ತೋರಿಸಿದ್ದಾರೆ. 

ಇಲ್ಲಿ ಮೊದಲ ಬಸ್ ನಿಲ್ದಾಣವನ್ನು ಸುಮಾರು 40 ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ಕೆಲವು ವರ್ಷಗಳ ಹಿಂದೆ ಅದು ಕುಸಿದಿದೆ. ಗ್ರಾಮಸ್ಥರಿಗೆ ಬಸ್ ಗೆ ಕಾಯಲು ಸರಿಯಾದ ಸ್ಥಳವಿಲ್ಲದೆ ಹತ್ತಿರದ ಹೊಟೇಲ್ ಅಥವಾ ಮನೆಯ ಮುಂದೆ ಕಾಯಬೇಕು. ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಮತ್ತು ಹಲವರು ಬಸ್ ಸೇವೆಗಳನ್ನು ಸಾಕಷ್ಟು ಅವಲಂಬಿಸಿದ್ದಾರೆ. ಮಳೆಗಾಲದಲ್ಲಿ ಬಹಳ ಕಷ್ಟವಾಗುತ್ತದೆ. 

ನಂತರ ಈ ಬಸ್ ನಿಲ್ದಾಣ ಸ್ಥಳ ತ್ಯಾಜ್ಯ ಸುರಿಯುವ ಸ್ಥಳವಾಗಿ ಮಾರ್ಪಟ್ಟಿತು. ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗದಿದ್ದಾಗ ಗ್ರಾಮಸ್ಥರು ಒಂದಿಷ್ಟು ಹಣ ಸಂಗ್ರಹಿಸಿ ತೆಂಗಿನ ಗರಿಗಳಿಂದ ತಾತ್ಕಾಲಿಕ ನಿಲ್ದಾಣ ನಿರ್ಮಿಸಿಕೊಂಡರು. ಎಮ್ಮೆಯನ್ನು ತಂದು ಉದ್ಘಾಟನೆ ಮಾಡಿದರು. 

ಕಳೆದೆರಡು ವರ್ಷಗಳಿಂದ ನಾವು ಸ್ಥಳೀಯ ಶಾಸಕರು ಮತ್ತು ಸಂಸದರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಮನವಿ ಮಾಡುತ್ತಿದ್ದೇವೆ. ಪ್ರತಿ ಬಾರಿಯೂ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖಂಡರು ಭರವಸೆ ನೀಡಿದರೂ ಏನೂ ಆಗಿಲ್ಲ. ಬಸ್ ತಂಗುದಾಣವು ಕಸ ಹಾಕುವ ರಾಶಿಯಾಗಿ ಮಾರ್ಪಟ್ಟಿದೆ. ಜನರು ಇನ್ನೂ ಆಶ್ರಯವಿಲ್ಲದೆ ಬಳಲುತ್ತಿದ್ದಾರೆ. ಆದ್ದರಿಂದ ನಾವು ದುರಸ್ತಿ ಮಾಡಲು ನಿರ್ಧರಿಸಿದ್ದೇವೆ ಅಧಿಕಾರಿಗಳಿಂದ ಏನೂ ನಿರೀಕ್ಷೆಯಿಟ್ಟುಕೊಂಡಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

ಬಸ್ ತಂಗುದಾಣವನ್ನು ಎಮ್ಮೆ ಉದ್ಘಾಟಿಸಿದ ನಂತರ, ಪ್ರತಿನಿಧಿಗಳ ನಿರ್ಲಕ್ಷ್ಯದ ಹಿಂದೆ ಕಾರಣವನ್ನು ಕೇಳುವ ವೀಡಿಯೊಗಳು ವೈರಲ್ ಆಗಿವೆ. ಶಿರಹಟ್ಟಿ ಶಾಸಕ ರಾಮಪ್ಪ ಲಮಾಣಿ, ನಾವು ಈ ವಿಷಯವನ್ನು ಶೀಘ್ರದಲ್ಲೇ ಪರಿಶೀಲಿಸುತ್ತೇವೆ. ಗ್ರಾಮಸ್ಥರಿಗೆ ಹೊಸ ಬಸ್ ತಂಗುದಾಣವನ್ನು ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT