ರಾಜ್ಯ

ಉಡುಪಿ: ಆ್ಯಂಬುಲೆನ್ಸ್ ಭೀಕರ ಅಪಘಾತದಲ್ಲಿ 4 ದುರ್ಮರಣ; ಎದೆನಡುಗಿಸೋ ವಿಡಿಯೋ!

Vishwanath S

ಉಡುಪಿ: ರೋಗಿಗಳ ಪ್ರಾಣ ಉಳಿಸುವ ಉದ್ದೇಶದಿಂದ ಆ್ಯಂಬುಲೆನ್ಸ್ ಚಾಲಕರು ಶತಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ದುರ್ದೈವ ಸಂಗತಿಯೆಂದರೆ ವೇಗವಾಗಿ ಬಂದ ಆ್ಯಂಬುಲೆನ್ಸ್ ಒಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದಿದ್ದು ನಾಲ್ವರು ದುರ್ಮರಣ ಹೊಂದಿದ್ದಾರೆ. 

ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಹೊನ್ನಾವರದಿಂದ ಕುಂದಾಪುರಕ್ಕೆ ಸಾಗಿಸಲಾಗುತ್ತಿತ್ತು. ಆದರೆ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಟೋಲ್ ಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು ರೋಗಿ, ರೋಗಿಯ ಪತ್ನಿ ಹಾಗೂ ಆ್ಯಂಬುಲೆನ್ಸ್ ಸಿಬ್ಬಂದಿ ದುರ್ಮರಣ ಹೊಂದಿದ್ದಾರೆ. 

ಅಪಘಾತದಲ್ಲಿ ರೋಗಿ ಲೋಕೇಶ್ ಮಾಧವ ನಾಯ್ಕ್, ಪತ್ನಿ ಜ್ಯೋತಿ, ಸಂಬಂಧಿಗಳಾದ ಗಜಾನನ ನಾಯ್ಕ್ ಮತ್ತು ಮಂಜುನಾಥ್ ನಾಯ್ಕ್ ಮೃತ ದುರ್ದೈವಿಗಳು.

ಅಪಘಾತದಲ್ಲಿ ಟೋಲ್ ಸಿಬ್ಬಂದಿ ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತದ ದೃಶ್ಯ ಟೋಲ್ ಗೇಟ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

SCROLL FOR NEXT