ಸಿಎಂ ಬೊಮ್ಮಾಯಿ 
ರಾಜ್ಯ

ಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಅರ್ಜಿ ಸಲ್ಲಿಕೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು  ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ  ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಸಲ್ಲಿಸಲಾಗುವುದು ಸಿಎಂ ತಿಳಿಸಿದ್ದಾರೆ.

ಮೈಸೂರು: ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು  ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ  ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  

ಅವರು ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಂತರ ನ್ಯಾಯಾಲಯದ ನಿರ್ದೇಶನದ ಅನುಗುಣವಾಗಿ ಚುನಾವಣಾ ಪ್ರಕ್ರಿಯೆ ನಡೆಸಲಾಗುವುದು ಎಂದರು.  ಮೈಸೂರು ಮೇಯರ್ ಚುನಾವಣೆ ಹಿಂದುಳಿದ ಆಯೋಗದ ವರದಿ ಬಂದ ಕೂಡಲೇ ನಡೆಸಲಾಗುವುದು ಎಂದು ತಿಳಿಸಿದರು.

ಜಿ.ಎಸ್.ಟಿ ಪರಿಹಾರ:

ಜಿ.ಎಸ್.ಟಿ ಪರಿಹಾರದ ವಿಸ್ತರಣೆ ಕಾನೂನಿನ ಅನ್ವಯ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ  ತಿಳಿಸಿದೆ. ಎಲ್ಲಾ ಪಕ್ಷಗಳು, ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅನುಮೋದನೆ ಮಾಡಿ ರೂಪಿಸಿರುವ ಕಾಯ್ದೆ ಜಿ.ಎಸ್.ಟಿ.  

ಕಾಯ್ದೆ ರೂಪಿಸಿದಾಗಲೇ ಐದು ವರ್ಷಕ್ಕೆ ಜಿ.ಎಸ್.ಟಿ ಪರಿಹಾರವನ್ನು ನಿಗದಿ ಮಾಡಲಾಗಿತ್ತು. ಕೋವಿಡ್ ಬಂದಂಥ ಸಂದರ್ಭದಲ್ಲಿಯೂ ಕೂಡ ಯಾವುದೇ ರೀತಿಯ ಸಂಗ್ರಹವಾಗದಿದ್ದರೂ ಪರಿಹಾರವನ್ನು ಕೇಂದ್ರ ಸರ್ಕಾರ ಕೊಟ್ಟಿದೆ. ಎಲ್ಲರೂ ಎರಡು ವರ್ಷ  ವಿಸ್ತರಣೆ ಮಾಡಲು ಕೋರಿದ್ದೆವು. ಆದರೆ, ಕಾನೂನಿನ ಅನ್ವಯ ಅದು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಬಾಕಿ ಇದ್ದ   8800 ಕೋಟಿ ರೂ.ಗಳನ್ನು ನೀಡಿದ್ದಾರೆ. ಅದಕ್ಕೆ ಯಾವುದೇ  ತೊಂದರೆ ಇಲ್ಲ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT