ಸಾಂದರ್ಭಿಕ ಚಿತ್ರ 
ರಾಜ್ಯ

ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ಪೂರೈಕೆ!

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕ ವಿತರಿಸಲು ಸರಕಾರ ನಿರ್ಧರಿಸಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕ ವಿತರಿಸಲು ಸರಕಾರ ನಿರ್ಧರಿಸಿದೆ.

ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ'ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌' ಯೋಜನೆಯಡಿ  1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ  ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನಗಳ ಕಾಲ ವಿತರಿಸಲಾಗುತ್ತದೆ.

 ರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು 46 ದಿನಗಳ ಕಾಲ  ಅನುಷ್ಠಾನಗೊಳಿಸಲಾಗಿತ್ತು.

ಈ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ 1-8ನೇ ತರಗತಿಯ ವಿದ್ಯಾರ್ಥಿಗಳಿಗೆ 100 ದಿನಗಳ ಕಾಲ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ  ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್ ಪ್ರಸ್ತಾವನೆ ಸಲ್ಲಿಸಿದ್ದರು.  ಆದರೆ ಸರ್ಕಾರ 46 ದಿನಗಳಿಗೆ ಅನುಮೋದನೆ ನೀಡಿದೆ.

ಈ ನಡುವೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟನೆ ನೀಡಿದ್ದು, ಯಾವುದೇ ವಿದ್ಯಾರ್ಥಿ ಬಲವಂತವಾಗಿ ಮೊಟ್ಟೆ ಸೇವಿಸುವಂತೆ ಒತ್ತಾಯಿಸುವುದಿಲ್ಲ, ಸಸ್ಯಾಹಾರಿಗಳು ಚಿಕ್ಕಿ ಮತ್ತು ಬಾಳೆಹಣ್ಣು ಆಯ್ಕೆ ಮಾಡಿಕೊಳ್ಳಬಹುದು ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?