ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ 
ರಾಜ್ಯ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಒದಗಿಸಲು 132 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬೆಂಗಳೂರು:  ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಒದಗಿಸಲು 132 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಶಾಲಾ ಮಕ್ಕಳಿಗೆ ಒಂದು ಜೊತೆ ಕಪ್ಪು ಶೂ ಮತ್ತು ಎರಡು ಬಿಳಿ ಸಾಕ್ಸ್ ಗಳನ್ನು ನೀಡಲಾಗುವುದು ಎಂದು  ಸಂಪುಟ ಸಭೆ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಮಾಧುಸ್ವಾಮಿ ತಿಳಿಸಿದರು. ಸುಮಾರು 43 ಲಕ್ಷದ 37 ಸಾವಿರ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಗಳನ್ನು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು. 

ರಾಜ್ಯದ ವಿವಿಧ ಕೈಗಾರಿಕೆಗಳು ಮತ್ತು ಉದ್ಯಮಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಒದಗಿಸುವ ಹೊಸ ಉದ್ಯೋಗ ನೀತಿಗೆ ಸಂಪುಟ ಅನುಮೋದನೆ ನೀಡಿದೆ. ಕೈಗಾರಿಕೆಗಳ ಬಂಡವಾಳ ಹೂಡಿಕೆ ಆಧಾರದ ಮೇಲೆ ಕನ್ನಡಿಗರಿಗೆ ಇಂತಿಷ್ಟೇ ಹುದ್ದೆಗಳನ್ನು ನೀಡಬೇಕು ಎಂಬ ಅಂಶಗಳನ್ನು ಹೊಸ ಉದ್ಯೋಗ ನೀತಿಯಲ್ಲಿ ಅಳವಡಿಸಲಾಗಿದೆ. ಇದರಿಂದ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸಿಗುತ್ತವೆ. ಉದ್ಯಮಗಳಿಗೆ ಸ್ಥಳೀಯರಿಗೆ ಉದ್ಯೋಗ ಸಿಕ್ಕಿದೆಯೇ ಇಲ್ಲವೇ ಎಂಬ ಬಗ್ಗೆಯೂ ಕೈಗಾರಿಕಾ ಇಲಾಖೆ ನಿಗಾ ವಹಿಸಲಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸನ್ನಡತೆ ಕೈದಿಗಳ ಬಿಡುಗಡೆಗೆ ಇದ್ದ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಮಕ್ಕಳು, ಶಿಶುಗಳು, ಮಹಿಳೆಯರ ಮೇಲೆ ಅಪರಾಧ ಪ್ರಕರಣ ಎಸಗಿರುವವರನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡದಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ತೀರ್ಮಾನಿಸಿದೆ. ಹಾಗೆಯೇ ಒದಕ್ಕಿಂತ ಹೆಚ್ಚು ಕೊಲೆ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡದಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿರುವುದಾಗಿ ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಬಹು ಮಹಡಿ ಕಟ್ಟಡ ಯೋಜನೆಯಡಿ ವಸತಿ ಇಲಾಖೆ ನಿರ್ಮಿಸಿರುವ 2 ಬೆಡ್ ರೂಂಗಳ ಅಪಾರ್ಟ್ ಮೆಂಟ್ ಗಳಿಗೆ ನಿಗದಿಪಡಿಸಲಾಗಿದ್ದ 15 ಲಕ್ಷ ರೂ. ಮೊತ್ತವನ್ನು 14 ಲಕ್ಷಕ್ಕೆ ನಿಗದಿ ಮಾಡಲಾಗಿದೆ. ಇದರಿಂದ ಈ ಮನೆಗಳಿಗೆ ಹೆಚ್ಚಿನ ಬೇಡಿಕೆ ಬರುವ ನಿರೀಕ್ಷೆಯಿದೆ. ಮೈಸೂರಿನ ವಿಮಾನ ನಿಲ್ದಾಣದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT