ವಸಂತ ನಗರದಲ್ಲಿ ಮಳೆಗೆ ಉರುಳಿದ ಮರ 
ರಾಜ್ಯ

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯಲ್ಲೋ ಅಲರ್ಟ್ ಮುನ್ಸೂಚನೆ ನೀಡಿದೆ.

ಬೆಂಗಳೂರು: ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯಲ್ಲೋ ಅಲರ್ಟ್ ಮುನ್ಸೂಚನೆ ನೀಡಿದೆ.

ನಗರದಲ್ಲಿ ಬುಧವಾರ ಮಧ್ಯರಾತ್ರಿಯಿಂದ ಗುರುವಾರ ಮುಂಜಾನೆಯವರೆಗೆ 8 cm (82.6 mm) ಮಳೆಯಾಗಿದೆ ಮತ್ತು ಗರಿಷ್ಠ ತಾಪಮಾನ 30.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20.5 ಡಿಗ್ರಿಗಳಷ್ಟು ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಸಿ ಮತ್ತು ಆರ್ದ್ರ ವಾತಾವರಣದಿಂದಾಗಿ ಭಾರೀ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಳದಿ ಅಲರ್ಟ್ ಎಂದರೆ ಯಾವುದೇ ಅಪಾಯವಿಲ್ಲ, ಆದರೆ 7 ಸೆಂ.ಮೀ ವರೆಗೆ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಬೆಂಗಳೂರು ಪೂರ್ವ ವಲಯದ ಸಂಪಂಗಿ ರಾಮನಗರದಲ್ಲಿ ಬುಧವಾರ ಮಧ್ಯರಾತ್ರಿಯಿಂದ ಗುರುವಾರ ಬೆಳಗಿನ ಜಾವದವರೆಗೆ ಅತಿ ಹೆಚ್ಚು ಅಂದರೆ 81.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ರಾತ್ರಿ 11 ಗಂಟೆಯಿಂದ ಆರಂಭವಾದ ಮಳೆ ರಾತ್ರಿಯಿಡೀ ಸುರಿದ ಪರಿಣಾಮ ಹಲವು ರಸ್ತೆಗಳು ಮತ್ತು ಅಂಡರ್‌ಪಾಸ್‌ಗಳು ಜಲಾವೃತಗೊಂಡಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT