ಒತ್ತುವರಿಯಾಗಿದ್ದ ಭೂಮಿ ವಶಪಡಿಸಿಕೊಂಡ ಪಾಲಿಕೆ 
ರಾಜ್ಯ

ಬಿಬಿಎಂಪಿಯಿಂದ 330 ಕೋಟಿ ರು. ಮೌಲ್ಯದ ಆಸ್ತಿ ವಶ

ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿ 330 ಕೋಟಿ ಮೌಲ್ಯದ ಎರಡು ಪ್ರಮುಖ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿ 330 ಕೋಟಿ ಮೌಲ್ಯದ ಎರಡು ಪ್ರಮುಖ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರ ಮತ್ತು ವಲಯ ಆಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಈ ಕ್ರಮ ತೆಗೆದುಕೊಂಡಿದ್ದಾರೆ. ಚಾಮರಾಜಪೇಟೆಯಲ್ಲಿ ಪೀರ್ ಬೌಂಡರಿ ಎಂದು ಗುರುತಿಸಲಾದ  300 ಕೋಟಿ ರೂ. ಮೌಲ್ಯದ 3.22 ಎಕರೆ ಭೂಮಿ ವಶಪಡಿಸಿಕೊಳ್ಳಲಾಗಿದೆ ಎಂದು ಪಶ್ಚಿಮ ವಲಯದ ಜಂಟಿ ಆಯುಕ್ತ ಎಸ್.ಎಂ.ಶ್ರೀನಿವಾಸ ತಿಳಿಸಿದ್ದಾರೆ.

"2013 ರಲ್ಲಿ ಹೈಕೋರ್ಟ್ ಪಾಲಿಕೆ ಪರವಾಗಿ ತೀರ್ಪು ನೀಡಿತು. ಮಾಲೀಕತ್ವವನ್ನು ಸಾಬೀತುಪಡಿಸಲು ಮತ್ತು ದಾಖಲೆಗಳನ್ನು ಒದಗಿಸಲು ಸಮಯ ನೀಡಲಾಯಿತು. ಅವರು ವಿಫಲವಾದ ಕಾರಣ ಪಾಲಿಕೆ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡು ಬೇಲಿ ಹಾಕಲಾಗಿದೆ ಎಂದು ಹೇಳಿದರು.

ಬೆಂಗಳೂರು ದಕ್ಷಿಣದ ಗಾಂಧಿ ಬಜಾರ್‌ನಲ್ಲಿ ನಿರ್ಮಿಸಲಾದ ಕಟ್ಟಡ ಸೇರಿದಂತೆ 30 ಕೋಟಿ ರು. ಮೌಲ್ಯದ 9,100 ಚದರ ಅಡಿ ಭೂಮಿಯನ್ನು ಪಾಲಿಕೆ ವಶಪಡಿಸಿಕೊಂಡಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಯರಪ್ಪ ರೆಡ್ಡಿ ಮಾತನಾಡಿ, ಕೆಲ ವರ್ಷಗಳ ಹಿಂದೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಪಾಲಿಕೆ ಪರವಾಗಿ ತೀರ್ಪು ನೀಡಿತ್ತು ಎಂದು ತಿಳಿಸಿದ್ದಾರೆ.

ಶುಕ್ರವಾರ ಅಕ್ರಮ ಶೆಡ್‌ಗಳು ಮತ್ತು ಸಂಕೀರ್ಣವನ್ನು ನೆಲಸಮಗೊಳಿಸಿದ ಪಾಲಿಕೆ ಆಸ್ತಿಯನ್ನು ಮರಳಿ ಪಡೆದಿದೆ. ಬಿಬಿಎಂಪಿ ಮಾರುಕಟ್ಟೆಗೆ ಸಮೀಪದಲ್ಲಿ ಮಲ್ಟಿ-ಲೆವೆಲ್ ಕಾರ್ ಪಾರ್ಕಿಂಗ್‌ನೊಂದಿಗೆ ವ್ಯಾಪಾರಿಗಳಿಗ ಸ್ಥಳವನ್ನು ನೀಡಲಾಗುತ್ತದೆ, ವಶಪಡಿಸಿಕೊಂಡ ಆಸ್ತಿಯಲ್ಲಿ ವಸತಿ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT