ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಬೆಂಗಳೂರು: ಯಶಸ್ಸಿಗಿಂತ ಸಾಧನೆ ಮುಖ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯಶಸ್ಸಿಗಿಂತ ಸಾಧನೆ ಮುಖ್ಯ. ನಿಮ್ಮ ಯಶಸ್ಸು ಇನ್ನಷ್ಟು ವ್ಯಕ್ತಿಗಳ ಸಾಧನೆಗೆ ಕಾರಣವಾಗುವುದೇ ನಿಜವಾದ ಸಾಧನೆ. ಹಾಗಾಗೀ ಸಾಧಕನಿಗೆ ಸಾವು ಅಂತ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು: ಯಶಸ್ಸಿಗಿಂತ ಸಾಧನೆ ಮುಖ್ಯ. ನಿಮ್ಮ ಯಶಸ್ಸು ಇನ್ನಷ್ಟು ವ್ಯಕ್ತಿಗಳ ಸಾಧನೆಗೆ ಕಾರಣವಾಗುವುದೇ ನಿಜವಾದ ಸಾಧನೆ. ಹಾಗಾಗೀ ಸಾಧಕನಿಗೆ ಸಾವು ಅಂತ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಹಾತ್ಮ ಗಾಂಧಿ ವಿದ್ಯಾ ಪೀಠ ಟ್ರಸ್ಟ್, ದಯಾನಂದ ಸಾಗರ್ ವಿದ್ಯಾಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಬ್ಯಾರಿಸ್ಟರ್ ಆರ್. ದಯನಾಂದ್ ಸಾಗರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾವಿನ ನಂತರವೂ ಬದುಕುವವನು ಸಾಧಕ ಎಂದು ಸ್ವಾಮಿ ವಿವೇಕನಾಂದರು ಹೇಳಿದ್ದಾರೆ. ಇವತ್ತಿನ ಕ್ಷಣವನ್ನು ಸಾರ್ಥಕತೆಯಿಂದ ಬದುಕಿದರೆ ನಾವು ಇಲ್ಲದಿರುವಾಗಲೂ ಜನ ನಮ್ಮನ್ನು ನೆನಪಿಸುತ್ತಾರೆ ಎಂದರು.

ದಯಾನಂದ ಸಾಗರ್ ಹಾಕಿದ ಅಡಿಪಾಯವನ್ನು ಬಳಸಿ ಅವರ ಇಬ್ಬರೂ ಮಕ್ಕಳು ಶಿಕ್ಷಣದ ಸಾಮ್ರಾಜ್ಯವನ್ನೇ ಕಟ್ಟಿದ್ದಾರೆ. ಅವರು ಸಾಧಕರು ಎಂದು ಕರೆದ ಮುಖ್ಯಮಂತ್ರಿ, ಕಲೆ, ಸಂಸ್ಕೃತಿಗಾಗಿ ಸಂಸ್ಥೆಗಳನ್ನು ಕಟ್ಟಿದ ದಯಾನಂದ ಸಾಗರ್ ಅವರು ಚಲನಚಿತ್ರ ರಂಗದಲ್ಲಿ ಸಂಸ್ಥೆಯನ್ನೇ ಕಟ್ಟಿದರು. ಅವರೊಬ್ಬ ಮುಂದಾಲೋಚನೆಯ ಸಾಂಸ್ಥಿಕ ವ್ಯಕ್ತಿಯಾಗಿದ್ದರು. ಲಕ್ಷಗಟ್ಟಲೇ ವಿದ್ಯಾರ್ಥಿಗಳಿಗೆ ದಾರಿ ದೀಪವಾದರು ಎಂದು ಸ್ಮರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್