ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಬೆಂಗಳೂರು: ಯಶಸ್ಸಿಗಿಂತ ಸಾಧನೆ ಮುಖ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯಶಸ್ಸಿಗಿಂತ ಸಾಧನೆ ಮುಖ್ಯ. ನಿಮ್ಮ ಯಶಸ್ಸು ಇನ್ನಷ್ಟು ವ್ಯಕ್ತಿಗಳ ಸಾಧನೆಗೆ ಕಾರಣವಾಗುವುದೇ ನಿಜವಾದ ಸಾಧನೆ. ಹಾಗಾಗೀ ಸಾಧಕನಿಗೆ ಸಾವು ಅಂತ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು: ಯಶಸ್ಸಿಗಿಂತ ಸಾಧನೆ ಮುಖ್ಯ. ನಿಮ್ಮ ಯಶಸ್ಸು ಇನ್ನಷ್ಟು ವ್ಯಕ್ತಿಗಳ ಸಾಧನೆಗೆ ಕಾರಣವಾಗುವುದೇ ನಿಜವಾದ ಸಾಧನೆ. ಹಾಗಾಗೀ ಸಾಧಕನಿಗೆ ಸಾವು ಅಂತ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಹಾತ್ಮ ಗಾಂಧಿ ವಿದ್ಯಾ ಪೀಠ ಟ್ರಸ್ಟ್, ದಯಾನಂದ ಸಾಗರ್ ವಿದ್ಯಾಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಬ್ಯಾರಿಸ್ಟರ್ ಆರ್. ದಯನಾಂದ್ ಸಾಗರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾವಿನ ನಂತರವೂ ಬದುಕುವವನು ಸಾಧಕ ಎಂದು ಸ್ವಾಮಿ ವಿವೇಕನಾಂದರು ಹೇಳಿದ್ದಾರೆ. ಇವತ್ತಿನ ಕ್ಷಣವನ್ನು ಸಾರ್ಥಕತೆಯಿಂದ ಬದುಕಿದರೆ ನಾವು ಇಲ್ಲದಿರುವಾಗಲೂ ಜನ ನಮ್ಮನ್ನು ನೆನಪಿಸುತ್ತಾರೆ ಎಂದರು.

ದಯಾನಂದ ಸಾಗರ್ ಹಾಕಿದ ಅಡಿಪಾಯವನ್ನು ಬಳಸಿ ಅವರ ಇಬ್ಬರೂ ಮಕ್ಕಳು ಶಿಕ್ಷಣದ ಸಾಮ್ರಾಜ್ಯವನ್ನೇ ಕಟ್ಟಿದ್ದಾರೆ. ಅವರು ಸಾಧಕರು ಎಂದು ಕರೆದ ಮುಖ್ಯಮಂತ್ರಿ, ಕಲೆ, ಸಂಸ್ಕೃತಿಗಾಗಿ ಸಂಸ್ಥೆಗಳನ್ನು ಕಟ್ಟಿದ ದಯಾನಂದ ಸಾಗರ್ ಅವರು ಚಲನಚಿತ್ರ ರಂಗದಲ್ಲಿ ಸಂಸ್ಥೆಯನ್ನೇ ಕಟ್ಟಿದರು. ಅವರೊಬ್ಬ ಮುಂದಾಲೋಚನೆಯ ಸಾಂಸ್ಥಿಕ ವ್ಯಕ್ತಿಯಾಗಿದ್ದರು. ಲಕ್ಷಗಟ್ಟಲೇ ವಿದ್ಯಾರ್ಥಿಗಳಿಗೆ ದಾರಿ ದೀಪವಾದರು ಎಂದು ಸ್ಮರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT